ಅಂಬಿ ಸಾಧನೆ, ಜನರ ಪ್ರೀತಿ ಸುಮಲತಾ ಕೈ ಹಿಡಿಯುತ್ತೆ- ಜಗ್ಗೇಶ್

Public TV
1 Min Read

ರಾಯಚೂರು: ನಟಿ ಸುಮಲತಾ ಅವರು ಸರಿಯಾದ ಸಮಯಕ್ಕೆ ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಾರೆ ಅನ್ನೋ ನಂಬಿಕೆಯಿದೆ. ಅಂಬರೀಶ್ ಸಾಧನೆ, ಜನರ ಪ್ರೀತಿ ಸುಮಲತಾ ಅವರ ಕೈ ಹಿಡಿಯುತ್ತೆ ಎಂದು ನವರಸನಾಯಕ ಜಗ್ಗೇಶ್ ಹೇಳಿದ್ದಾರೆ.

56 ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ನಟ ನವರಸನಾಯಕ ಜಗ್ಗೇಶ್ ಪ್ರತೀ ವರ್ಷದಂತೆ ಈ ಬಾರಿಯೂ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು. ಈ ವೇಳೆ ಮಂತ್ರಾಲಯದಲ್ಲಿ ಮಾತನಾಡಿದ ಅವರು, ಎಷ್ಟೇ ದೇವಸ್ಥಾನಗಳಿಗೆ ಹೋದರು ರಾಯರ ದರ್ಶನ ಪಡೆದರೆ ಮಾತ್ರ ಸಮಾಧಾನ ಆಗುತ್ತೆ ಎಂದರು.

ರಾಜಕೀಯ ವಿಚಾರವಾಗಿ ಸಮಲತಾ ಸ್ಪರ್ಧೆ ಕುರಿತು ಮಾತನಾಡಿ, ರಾಜಕೀಯ ಹೊರತುಪಡಿಸಿ ಅಂಬರೀಶ್ ಅವರ ಜೊತೆ 30 ವರ್ಷಗಳ ಸಂಬಂಧವಿದೆ. ಯಾವತ್ತೂ ಕೂಡ ಅವರ ಕುಟುಂಬಕ್ಕೆ ಒಳಿತನ್ನೇ ಬಯಸುತ್ತೇನೆ. ಸುಮಲತಾ ಅವರು ಸರಿಯಾದ ಸಮಯಕ್ಕೆ ದಿಟ್ಟ ನಿರ್ಧಾರ ತೆಗೆದುಕೊಳ್ಳುತ್ತಾರೆ ಅನ್ನೋ ನಂಬಿಕೆಯಿದೆ. ಅಂಬರೀಶ್ ಸಾಧನೆ, ಜನರ ಪ್ರೀತಿ ಸುಮಲತಾ ಅವರ ಕೈ ಹಿಡಿಯುತ್ತೆ ಎಂದರು.

ನಟರು ಊಟಕ್ಕಾಗಿ ಬಣ್ಣಹಚ್ಚಿದ್ರೆ ರಾಜಕಾರಣಿಗಳು ವೋಟಿಗಾಗಿ ಬಣ್ಣ ಹಚ್ಚುತ್ತಾರೆ. ಬಣ್ಣ ಹಾಕಿಕೊಳ್ಳುವ ರಾಜಕಾರಣಿಗಳ ಬಣ್ಣ ಜನ ತೆಗೀತಾರೆ. ರಾಜಕಾರಣಿಗಳು ಮಾನ, ಮರ್ಯಾದೆ ಕೆಡಿಸಿಕೊಂಡಿದ್ದೇವೆ. ಅದರಲ್ಲಿ ಯಾರೂ ಉತ್ತಮರು ಅನ್ನೋದನ್ನ ಜನ ನಿರ್ಣಯ ಮಾಡುತ್ತಾರೆ ಎಂದರು.

ಸ್ವಹಿತಾಸ್ತಕಿಗೆ ಮಹಾಘಟಬಂಧನ್ ಮಾಡಿಕೊಳ್ಳಲಾಗಿದೆ. ಅಭಿವೃದ್ಧಿ ಭಾರತವನ್ನ ನೋಡಬೇಕು ಅಂದ್ರೆ ಮೋದಿಗೆ ಅಧಿಕಾರ ಕೊಡಬೇಕು ಎಂದು ಜಗ್ಗೇಶ್ ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *