ನಟ ಚಿರಂಜೀವಿ ಅಭಿಮಾನಿಗಳಿಗೆ ಕಿಚ್ಚನಿಂದ ಗುಡ್ ನ್ಯೂಸ್

Public TV
1 Min Read

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಕಿಚ್ಚ ಸುದೀಪ್ ಅವರು ಟಾಲಿವುಡ್ ಮೆಗಾ ಸ್ಟಾರ್ ಚಿರಂಜೀವಿ ಮತ್ತು ತಮ್ಮ ಅಭಿಮಾನಿಗಳಿಗೆ ಸಂತಸದ ಸುದ್ದಿ ನೀಡಿದ್ದಾರೆ.

ಸುದೀಪ್ ಅವರಿಗೆ ಸ್ಯಾಂಡಲ್‍ವುಡ್ ಮಾತ್ರವಲ್ಲದೆ ಕಾಲಿವುಡ್, ಟಾಲಿವುಡ್ ಮತ್ತು ಬಾಲಿವುಡ್ ನಲ್ಲಿಯೂ ಡಿಮ್ಯಾಂಡ್ ಇದ್ದು, ಅಭಿಮಾನಿಗಳ ಮೆಚ್ಚುಗೆಯನ್ನು ಪಡೆದುಕೊಂಡಿದ್ದಾರೆ. ಈಗ ಚಿರಂಜೀವಿ ಜೊತೆಗೆ ಸಿನಿಮಾ ಮಾಡುವುದಾಗಿ ಸುದೀಪ್ ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ: ಇಬ್ಬರು ಮೆಗಾಸ್ಟಾರ್‍ಗಳ ಜೊತೆ ನಟಿಸಲಿದ್ದಾರೆ ಕಿಚ್ಚ ಸುದೀಪ್

ಸುದೀಪ್ ಈ ಹಿಂದೆ ತೆಲುಗಿನಲ್ಲಿ `ಈಗ’ ಮತ್ತು `ಬಾಹುಬಲಿ’ ಸಿನಿಮಾಗಳಲ್ಲಿ ಅಭಿನಯಿಸಿ ಜನಪ್ರಿಯತೆ ಗಳಿಸಿದ್ದಾರೆ. ಈಗ ಮೆಗಾ ಸ್ಟಾರ್ ಚಿರಂಜೀವಿ ಅವರ 151ನೇ ಚಿತ್ರ `ಸೈರಾ ನರಸಿಂಹ ರೆಡ್ಡಿ’ ಯಲ್ಲಿ ತೆರೆ ಹಂಚಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಕಿಚ್ಚ ಸುದೀಪ್ ಈ ಸಿನಿಮಾದಲ್ಲಿ ಬೇಕೇ ಬೇಕು ಎಂದು ಹಠ ಹಿಡಿದಿದ್ದಾರೆ ನಿರ್ದೇಶಕ!

ಈ ಸಿನಿಮಾಗೆ ಸುದೀಪ್ ಚಿರಂಜೀವಿ ಜೊತೆ ಅಭಿನಯಿಸುತ್ತಾರೆ ಎಂದು ಸುದ್ದಿ ಕಳೆದ ವರ್ಷದಿಂದ ಗಾಂಧಿನಗರದಲ್ಲಿ ಹರಿದಾಡುತಿತ್ತು. ಆದರೆ ಈ ಸಿನಿಮಾಗೆ ತುಂಬಾ ದಿನ ಕಾಲ್ ಶೀಟ್ ಕೊಡಬೇಕು ಎಂಬ ಕಾರಣದಿಂದ ಈ ಸಿನಿಮಾ ಮಾಡಲು ಸುದೀಪ್ ನಿರಾಕರಿಸಿದ್ದರು ಎಂದು ವರದಿಯಾಗಿತ್ತು. ಈ ಸುದ್ದಿ ತಿಳಿಯುತ್ತಿದ್ದಂತೆ ಅಭಿಮಾನಿಗಳಿಗೆ ನಿರಾಸೆ ಆಗಿತ್ತು. ಆದರೆ ಈಗ ಸುದೀಪ್ ಚಿರಂಜೀವಿ ಸಿನಿಮಾದಲ್ಲಿ ಅಭಿನಯಿಸಲು ಒಪ್ಪಿಕೊಂಡಿದ್ದರಿಂದ ಅಭಿಮಾಗಳಿಗೆ ಖುಷಿಯಾಗಿದೆ.

`ಸೈರಾ ನರಸಿಂಹ ರೆಡ್ಡಿ’ ಸಿನಿಮಾದಲ್ಲಿ ಬರುವ ಒಂದು ಪ್ರಮುಖ ಪಾತ್ರಕ್ಕೆ ಸುದೀಪ್ ಅವರೇ ಸೂಕ್ತ ಎಂದು ನಿರ್ದೇಶಕ ಸುರೇಂದರ್ ರೆಡ್ಡಿ ನಿರ್ಧರಿಸಿದ್ದರು. ಆದ್ದರಿಂದ ನಿರ್ದೇಶಕರ ಒತ್ತಾಯದ ಮೇರೆಗೆ ಸುದೀಪ್ ಚಿರಂಜೀವಿ ಸಿನಿಮಾದಲ್ಲಿ ಅಭಿನಯಿಸಲು ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಸುದೀಪ್ ಅವರು ತಮ್ಮ ಟ್ವಿಟ್ಟರ್ ನಲ್ಲಿ ಹೇಳಿದ್ದಾರೆ. ಸದ್ಯಕ್ಕೆ ಸುದೀಪ್ `ಪೈಲ್ವಾನ್’ ಹಾಗೂ `ಕೋಟಿಗೊಬ್ಬ-3′ ಸಿನಿಮಾಗಳ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *