ಶೂಟಿಂಗ್ ವೇಳೆ ನಟ ಪೃಥ್ವಿರಾಜ್‌ಗೆ ಗಂಭೀರ ಗಾಯ: ಇಂದು ಸರ್ಜರಿ

Public TV
1 Min Read

ಲಯಾಳಂನ (Malayalam) ಖ್ಯಾತ ನಟ ಪೃಥ್ವಿರಾಜ್ ಸುಕುಮಾರನ್ ನಿನ್ನ ನಡೆದ ಶೂಟಿಂಗ್ ವೇಳೆ ಕಾಲಿಗೆ ಬಲವಾದ ಪೆಟ್ಟು ಮಾಡಿಕೊಂಡಿದ್ದರು. ವಿಲಾಯತ್ ಬುದ್ದ ಸಿನಿಮಾದ ಚಿತ್ರೀಕರಣದ ವೇಳೆ ಈ ಅವಘಡ (Avaghada) ನಡೆದಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಶಸ್ತ್ರ ಚಿಕಿತ್ಸೆ ಮಾಡುವುದಾಗಿ ವೈದ್ಯರು ತಿಳಿಸಿದ್ದಾರೆ.

ಬಹು ನಿರೀಕ್ಷಿತ ಮಲಯಾಳಂನ ವಿಲಾಯತ್ ಬುದ್ದ (Vilayat Buddha) ಸಿನಿಮಾದ ಸಾಹಸ ಪ್ರಧಾನ ದೃಶ್ಯವನ್ನು ಚಿತ್ರೀಕರಣ ಮಾಡುತ್ತಿದ್ದರು ನಿರ್ದೇಶಕರು ಈ ವೇಳೆ ಕಾಲಿಗೆ ಬಲವಾಗಿಯೇ ಏಟಾಗಿತ್ತು. ಶಸ್ತ್ರ ಚಿಕಿತ್ಸೆಯ (Surgery) ನಂತರ ಕೆಲ ವಾರಗಳ ಕಾಲ ಅವರು ವಿಶ್ರಾಂತಿ ಪಡೆದುಕೊಳ್ಳುವುದು ಅನಿವಾರ್ಯವಾಗಿದೆ. ಹಾಗಾಗಿ ಚಿತ್ರೀಕರಣಕ್ಕೆ ಬ್ರೇಕ್ ಬೀಳಲಿದೆ. ಇದನ್ನೂ ಓದಿ: ಹೃದಯ ಕಿತ್ತು ಎದೆಗೆ ಹಚ್ಚಿಕೊಂಡು ಪಾರ್ಟಿಗೆ ಬಂದ ಉರ್ಫಿ ಜಾವೇದ್

ಪೃಥ್ವಿರಾಜ್ ಸುಕುಮಾರನ್ (Prithviraj Sukumaran) ಅವರನ್ನು ಆಸ್ಪತ್ರೆಗೆ ದಾಖಲಿಸಿರುವ ಸುದ್ದಿ ಹರಡುತ್ತಿದ್ದಂತೆಯೇ ಅವರ ಅಭಿಮಾನಿಗಳು ಆಸ್ಪತ್ರೆಯ ಮುಂದೆ ಜಮಾಯಿಸಿದ್ದರು. ನಟನ ಆರೋಗ್ಯದ ಕುರಿತಾಗಿ ಅಪ್ ಡೇಟ್ ಪಡೆಯಲು ಕಾದಿದ್ದರು. ಆತಂಕ ಪಡುವಂಥದ್ದು ಏನೂ ಆಗಿಲ್ಲ. ಸಣ್ಣದೊಂದು ಸರ್ಜರಿ ಮಾಡಬೇಕಿದೆ ಎಂದು ವೈದ್ಯರು ಹೇಳಿದ ಬಳಿಕವೇ ಅಭಿಮಾನಿಗಳು ಅಲ್ಲಿಂದ ಹೊರಟಿದ್ದಾರೆ.

 

ಪೃಥ್ವಿರಾಜ್ ಸುಕುಮಾರನ್ ಗೂ ಕನ್ನಡ ಚಿತ್ರೋದ್ಯಮಕ್ಕೂ ಸಾಕಷ್ಟು ನಂಟಿದೆ. ಹೊಂಬಾಳೆ ಬ್ಯಾನರ್ಸ್ ನಲ್ಲಿ ಇವರೊಂದು ಸಿನಿಮಾವೊಂದನ್ನು ನಿರ್ದೇಶನ ಹಾಗೂ ನಟನೆ ಮಾಡಬೇಕಿದೆ. ಸಲಾರ್ ಸಿನಿಮಾದಲ್ಲೂ ಇವರು ಮಹತ್ವದ ಪಾತ್ರ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

Share This Article