ಕುರಿಗಾಯಿ ಜೊತೆಗೆ ಕುಳಿತು ಊಟ ಮಾಡಿದ ನಟ ಪುನೀತ್

Public TV
1 Min Read

ಕೊಪ್ಪಳ: ಸಾಕಷ್ಟು ಅಭಿಮಾನಿಗಳ ಮನಸ್ಸನ್ನು ಗೆದ್ದಿರುವ ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಸಾಮಾನ್ಯರಂತೆ ಜಮೀನಲ್ಲಿ ಕುರಿಗಾಯಿ ಹಾಕಿರುವ ಹಟ್ಟಿಯಲ್ಲಿ ಕುಳಿತು ಊಟ ಮಾಡಿದ್ದಾರೆ.

ಕೊಪ್ಪಳದ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತಕ್ಕೆ ಆಗಮಿಸಿದ ಪುನೀತ್ ರಾಜ್‍ಕುಮಾರ್ ಅವರು ಬೆಟ್ಟ ಬಂದ್ ಇರುವುದರಿಂದ ಗಂಗಾವತಿ ಸಮೀಪದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಸುತ್ತಾಟ ನಡೆಸಿದ್ದಾರೆ. ಸ್ಥಳೀಯ ಪ್ರವಾಸಿ ಸ್ಥಳಗಳಾದ ಋಷಿಮುಖ ಪರ್ವತ, ಸಣಾಪೂರ, ಬಂಡಿ ಹಲಾಪೂರ, ನಾರಾಯಣ ಪೇಟೆ ಊರುಗಳಿಗೆ ಭೇಟಿಯನ್ನು ನೀಡಿದ್ದಾರೆ. ಇದನ್ನೂ ಓದಿ: ಸಕ್ರೆಬೈಲು ಆನೆ ಬಿಡಾರದಲ್ಲಿ ಡಾಕ್ಯುಮೆಂಟರಿ ಶೂಟಿಂಗ್‍ನಲ್ಲಿ ಪವರ್ ಸ್ಟಾರ್

ಗಂಗಾವತಿ ಸುತ್ತಾಟ ನಡೆಸಿ ವಿಜಯನಗರಕ್ಕೆ ಹೋಗುವ ವೇಳೆಯಲ್ಲಿ ದಾರಿಯ ಜಮೀನಿನಲ್ಲಿ ಕುರಿಗಾಯಿ ಹಾಕಿರುವ ಕುರಿ ಹಟ್ಟಿಗೆ ಭೇಟಿಯನ್ನು ನೀಡಿದ್ದಾರೆ. ಕುರಿಗಾಯಿ ಜೊತೆ ಮಾತುಕತೆ ನಡೆಸಿದ್ದಾರೆ. ಪುನೀತ್ ರಾಜ್‍ಕುಮಾರ್ ಅವರು ಅವರ ಕಂಬಳಿ ಮೇಲೆ ಕುಳಿತು, ಕುರಿಗಾಯಿ ಊಟ ಮಾಡುವ ಊಟ ಮಾಡಿ ಸರಳತೆಯನ್ನು ಮೆರೆದಿದ್ದಾರೆ. ಇದನ್ನೂ ಓದಿ: ರಾಯನ್ ರಾಜ್ ಸರ್ಜಾಗೆ ದೇವರು ಪ್ರಪಂಚದ ಪ್ರತಿಯೊಂದು ಸಂತೋಷವನ್ನು ನೀಡಲಿ: ಸುಮಲತಾ

ಕುರಿಗಾಯಿ ಮಕ್ಕಳ ಹಾಗೂ ಕುರಿಗಾಯಿ ಜೊತೆಗೆ ತಮ್ಮ ಐಶಾರಾಮಿ ಕಾರಿನ ಮುಂದೆ ನಿಂತುಕೊಂಡು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಆನೆಗೊಂದಿ ಸಮೀಪದ ಐತಿಹಾಸಿಕ ಸ್ಥಳಗಳ ವಿಕ್ಷಣೆಗೆ ಕುತೂಹಲ ಹೊಂದಿದ್ದ ಪುನೀತ್ ರಾಜ್‍ಕುಮಾರ್ ಅವರು ಸಮೀಪದ ಸಣಾಪೂರ ಕೆರೆ, ಸಣಾಪೂರ ಪಾಲ್ಸ್, ಕಲ್ಲಿನ ಸೇತುವೆ ಸೇರಿದಂತೆ ಇತರ ಸ್ಥಳಗಳನ್ನು ವಿಕ್ಷಣೆಯನ್ನು ಮಾಡಿದರು. ನಂತರ ಸ್ಥಳೀಯ ಜನರು ಹಾಗೂ ಪುನೀತ್ ಅವರ ಅಭಿಮಾನಿಗಳು ಪುನೀತ್ ರಾಜ್‍ಕುಮಾರ್ ಅವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಪಟ್ಟರು. ಅಷ್ಟೇ ಅಲ್ಲದೆ ಸ್ಥಳೀಯ ಕಲಾವಿದರೊಂದಿಗೆ ಸಂಗೀತ ಕಾರ್ಯಕ್ರಮದಲ್ಲಿ ಭಾಗಿಯಾದರು.

Share This Article
Leave a Comment

Leave a Reply

Your email address will not be published. Required fields are marked *