ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ

Public TV
1 Min Read

– ಆಗ ಕಮಲ್ ಏನು ಮಾತಾಡ್ತಿದ್ದಾರೆ ಅಂತಾ ಗೊತ್ತಾಗ್ಲಿಲ್ಲ ಎಂದ ಶಿವರಾಜ್‌ಕುಮಾರ್

ನ್ನಡ ಭಾಷೆ ಬಗ್ಗೆ ನಟ ಕಮಲ್ ಹಾಸನ್ (Kamal Haasan) ನೀಡಿದ ಹೇಳಿಕೆ ವಿವಾದದ ಬಗ್ಗೆ ಕೊನೆಗೂ ನಟ ಶಿವರಾಜ್‌ಕುಮಾರ್ (Shivarajkumar) ಮೌನ ಮುರಿದಿದ್ದಾರೆ.

ವಿವಾದ ಕುರಿತು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ಶಿವಣ್ಣ ಅವರು, ಕಮಲ್ ಹಾಸನ್ ಹೇಳಿದ ಮಾತನ್ನ ನಾನೇನು ಸಮರ್ಥನೆ ಮಾಡಿಕೊಳ್ಳಲ್ಲ. ಭಾಷೆ ಮಾತಾಡ್ತಿದ್ದಾರೆ ಅಂದಾಗ ನಾನು ಕೈ ತಟ್ಟಿದ್ದು ನಿಜ. ಆ ಸಂದರ್ಭದಲ್ಲಿ ಏನ್ ಮಾತಾಡ್ತಿದ್ದಾರೆ ಅಂತಾ ಗೊತ್ತಾಗ್ಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕಮಲ್ ಹಾಸನ್ ಕ್ಷಮೆ ಕೇಳೋವರೆಗೂ ಬಿಡೋದಿಲ್ಲ: ಶಿವರಾಜ್ ತಂಗಡಗಿ

ಕನ್ನಡ ಅಭಿಮಾನದ ಬಗ್ಗೆ ಎಲ್ಲರೂ ಮಾತಾಡ್ತಿದ್ದಾರೆ. ಕನ್ನಡ ಅಭಿಮಾನ ಏನು ಅನ್ನೋದು ನಮಗೂ ಗೊತ್ತಿದೆ. ನಾನು ಕೂಡ ಕನ್ನಡ ಅಭಿಮಾನೀನೆ. ನಾನು ಕೂಡ ಕನ್ನಡ ಅಭಿಮಾನೀನೆ. ಅಣ್ಣಾವ್ರ ಕನ್ನಡ ಅಭಿಮಾನ ನಿಮಗೆಲ್ಲರಿಗೂ ಗೊತ್ತೇ ಇದೆ ಎಂದು ಶಿವಣ್ಣ ತಿಳಿಸಿದ್ದಾರೆ.

ಸ್ಟೇಜ್‌ನಲ್ಲಿ ನೀವು ಯಾಕೆ ಪ್ರಶ್ನೆ ಮಾಡ್ಲಿಲ್ಲ ಅಂದಾಗ, ಅವ್ರು ಮಾತನಾಡಿದ್ದು ನನಗೆ ಸ್ಪಷ್ಟವಾಗಿ ಕೇಳಲಿಲ್ಲ. ನೀವು ಆ ಬಗ್ಗೆ ಅವರನ್ನೇ ಪ್ರಶ್ನೆ ಮಾಡಬೇಕು. ಕಮಲ್ ಹಾಸನ್ ಮಾತಾಡಿದ್ದನ್ನ ನಾನು ಸಮರ್ಥನೆ ಮಾಡಿಕೊಳ್ಳಲ್ಲ. ಆ ಬಗ್ಗೆ ಅವರನ್ನೇ ಪ್ರಶ್ನೆ ಮಾಡಿ. ನಾನು ಎರಡನೇ ಬಾರಿ ಕ್ಲಿಪ್ಪಿಂಗ್ ಕೇಳಿದಾಗಲೇ ಗೊತ್ತಾಗಿದ್ದು ಎಂದಿದ್ದಾರೆ. ಇದನ್ನೂ ಓದಿ: ಕಮಲ್ ಹಾಸನ್ ಕನ್ನಡ ಕಾಂಟ್ರವರ್ಸಿ ಬಗ್ಗೆ ಕೇಳ್ತಿದ್ದಂತೆ ಕೈಮುಗಿದ ಶಿವಣ್ಣ!

ಆ ಕಾರ್ಯಕ್ರಮದಲ್ಲಿ ಕಮಲ್ ಹಾಸನ್ ಮಾತಾಡಿದ್ದು, ನನಗೆ ಗೊತ್ತಾಗಿಲ್ಲ. ಹೀಗಾಗಿ ಚಪ್ಪಾಳೆ ತಟ್ಟಿದೆ. ಕಲಾವಿದನಾಗಿ ಭಾಷೆ ಬಗ್ಗೆ ಮಾತಾಡಿದಾಗ ಚಪ್ಪಾಳೆ ತಟ್ಟಿದ್ದೆ. ಕೊನೆಗೂ ಕನ್ನಡ ಅವಮಾನದ ಬಗ್ಗೆ ಶಿವಣ್ಣ ಮೌನ ಮುರಿದಿದ್ದಾರೆ.

Share This Article