ಶ್ರೀ ವಿರಾಂಜನೇಯ ಸ್ವಾಮಿಯ ದರ್ಶನ ಪಡೆದ ನಟ ಶಿವರಾಜ್ ಕುಮಾರ್!

Public TV
0 Min Read

ಚಿಕ್ಕಬಳ್ಳಾಪುರ: ನಟ ಶಿವರಾಜ್ ಕುಮಾರ್ ನಗರ ಹೊರವಲಯದ ಆದಿಚುಂಚನಗಿರಿ ಚಿಕ್ಕಬಳ್ಳಾಪುರ ಶಾಖಾ ಮಠದ ಸೂಲಾಲಪ್ಪನದಿನ್ನೆ ಬಳಿಯ ಶ್ರೀ ವಿರಾಂಜನೇಯ ಸ್ವಾಮಿಯ ದರ್ಶನ ಪಡೆದರು.

ಆದಿಚುಂಚನಗಿರಿ ಶಾಖಾ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳ ಜೊತೆ ಆಗಮಿಸಿದ ನಟ ಶಿವರಾಜ್ ಕುಮಾರ್ ಮೊದಲಿಗೆ ಶ್ರೀ ವಿರಾಂಜನೇಯನ ದರ್ಶನ ಪಡೆದರು. ತದನಂತರ ಅಗಲಗುರ್ಕಿ ಬಳಿಯ ಬಿಜಿಎಸ್ ಪಿಯು ಕಾಲೇಜಿನ ಸ್ವಸ್ಥಿ 2018 ರ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ನೂತನವಾಗಿ ಪ್ರಥಮ ಪಿಯುಸಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ನಿರ್ಮಲಾನಂದನಾಥ ಸ್ವಾಮೀಜಿ ಆರ್ಶೀವಚನ ನೀಡಿದರು. ಶಿವರಾಜ್ ಕುಮಾರ್ ವಿದ್ಯಾರ್ಥಿಗಳಿಗೆ ಭವಿಷ್ಯದ ಬಗ್ಗೆ ಹಿತನುಡಿಗಳನ್ನ ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *