ಯುವಿ ಬಗ್ಗೆ ಕಿಚ್ಚನ ಮನದಾಳದ ಮಾತು

Public TV
1 Min Read

ಬೆಂಗಳೂರು: ಭಾರತ ಕ್ರಿಕೆಟ್ ತಂಡ ಎಡಗೈ ಸ್ಫೋಟಕ ಆಟಗಾರ ಯುವರಾಜ್ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ವಿದಾಯ ಹೇಳಿದ್ದಾರೆ. ಇವರ ವಿದಾಯಕ್ಕೆ ಅಭಿಮಾನಿಗಳು, ಕ್ರಿಕೆಟಿಗರು ಸೇರಿದಂತೆ ಸಿನಿಮಾರಂಗದವರು ಬೇಸರ ವ್ಯಕ್ತಪಡಿಸಿದ್ದಾರೆ. ಇದೀಗ ನಟ ಕಿಚ್ಚ ಸುದೀಪ್ ಅವರು ಯುವರಾಜ್ ಬಗ್ಗೆ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ನಾನು ದ್ವೇಷಿಸುತ್ತಿದ್ದ ಕ್ರಿಕೆಟ್ ಎಲ್ಲವನ್ನೂ ಕಲಿಸಿಕೊಟ್ಟಿತು: ಯುವಿ

ನಟ ಸುದೀಪ್ ಟ್ವೀಟ್ ಮಾಡುವ ಮೂಲಕ ಯುವರಾಜ್ ಅವರ ಬಗ್ಗೆ ತನ್ನ ಮನದಾಳದ ಮಾತುಗಳನ್ನು ಹೇಳಿಕೊಂಡಿದ್ದಾರೆ. “ಇಂದು ನಿಮ್ಮ ಬಗ್ಗೆ ಟ್ವೀಟ್ ಮಾಡುತ್ತಿರುವ ನಮ್ಮ ಬಗ್ಗೆ ನಿಮಗೆ ತಿಳಿಯದೆ ಇರಬಹುದು. ಆದರೆ ನಾವು ನಿಮ್ಮನ್ನು ಎಷ್ಟು ಪ್ರೀತಿಸುತ್ತೇವೆ ಮತ್ತು ನೀವು ಅನೇಕರಿಗೆ ಅದಮ್ಯ ಸ್ಫೂರ್ತಿದಾಯಕರಾಗಿದ್ದೀರಿ ಎಂಬುದನ್ನ ಹೇಳುವ ಸಲುವಾಗಿ ನಾವು ಟ್ವೀಟ್ ಮಾಡುತ್ತೇವೆ. ನಿಮ್ಮನ್ನು ಮತ್ತೆ ಬ್ಲೂ ಜೆರ್ಸಿಯಲ್ಲಿ ನೋಡಲು ಬಯಸುತ್ತೇನೆ. ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ” ಎಂದು ಸುದೀಪ್ ಹೇಳಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾಗೆ ಮರು ಆಯ್ಕೆಯಾದಾಗ ಕಣ್ಣೀರಿಟ್ಟಿದ್ದ ಯುವಿಯನ್ನು ನೆನೆದ ಪತ್ನಿ

ಯುವರಾಜ್ ಸಿಂಗ್ 2000ನೇ ಇಸ್ವಿಯಲ್ಲಿ ಕೀನ್ಯಾ ವಿರುದ್ಧ ಏಕದಿನ ಕ್ರಿಕೆಟ್‍ಗೆ ಪಾದಾರ್ಪಣೆ ಮಾಡಿದ್ದ ಅವರು ಇದೂವರೆಗೂ 304 ಏಕದಿನ ಪಂದ್ಯಗಳಲ್ಲಿ ಆಡಿ 8,701 ರನ್ ಸಿಡಿಸಿದ್ದಾರೆ. ನಟ ಸುದೀಪ್ ಅವರಿಗೆ ಕ್ರಿಕೆಟ್ ಆಟ ಎಂದರೆ ಆಸಕ್ತಿ ಇದೆ. ಸಿಸಿಎಲ್, ಕೆಪಿಎಲ್, ಕೆಸಿಸಿ, ಲಂಡನ್ ಕಾರ್ಪೋರೇಟ್ ಕ್ರಿಕೆಟ್ ಟೂರ್ನಿ ಸೇರಿದಂತೆ ಅನೇಕ ಕಡೆ ಕ್ರಿಕೆಟ್ ಆಡಿರುವ ಅನುಭವವಿದೆ.

Share This Article
Leave a Comment

Leave a Reply

Your email address will not be published. Required fields are marked *