ಹಾರ, ಕೇಕ್, ಬ್ಯಾನರ್‍ಗಳಿಗೆ ಅನವಶ್ಯಕ ಖರ್ಚು ಮಾಡ್ದೆ ನನ್ನ ಹುಟ್ಟುಹಬ್ಬದಲ್ಲಿ ಪಾಲ್ಗೊಳ್ಳಿ: ಉಪ್ಪಿ

Public TV
1 Min Read

ಬೆಂಗಳೂರು: ಹುಟ್ಟುಹಬ್ಬ ಆಚರಣೆಯನ್ನ ಮಾಡದಿರುವ ನಟರ ಲಿಸ್ಟ್ ಗೆ ಇದೀಗ ರಿಯಲ್ ಸ್ಟಾರ್ ಉಪೇಂದ್ರ ಸೇರ್ಪಡೆ ಆಗಿದ್ದಾರೆ. ಕಿಚ್ಚ ಸುದೀಪ್‍ರಂತೆಯೇ ಉಪೇಂದ್ರ ಸಾಮಾಜಿಕ ಜಾಲತಾಣದ ಮೂಲಕ ಹುಟ್ಟುಹಬ್ಬವನ್ನ ಗ್ರ್ಯಾಂಡ್ ಆಗಿ ಆಚರಿಸದಂತೆ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರೋ ಉಪೇಂದ್ರ, “ಪ್ರೀತಿಯ ಅಭಿಮಾನಿಗಳೇ ಹಾರ, ಕೇಕ್, ಬ್ಯಾನರ್‍ಗಳಿಗೆ ಅನವಶ್ಯಕ ಖರ್ಚು ಮಾಡದೆ ನಿಮ್ಮ ಪ್ರೀತಿ ಶುಭಾಶಯಗಳೊಂದಿಗೆ ಬಂದು ನನ್ನ ಹುಟ್ಟುಹಬ್ಬದಲ್ಲಿ ಪಾಲ್ಗೊಳ್ಳಿ ಎಂದಿದ್ದಾರೆ.

ಇದೇ ಸಪ್ಟೆಂಬರ್ 18ಕ್ಕೆ ಉಪೇಂದ್ರ ಜನುಮದಿನ. ಈ ಹಿನ್ನೆಲೆಯಲ್ಲಿ ಅಭಿಮಾನಿಗಳನ್ನುದ್ದೇಶಿಸಿ ಉಪೇಂದ್ರ ಈ ಮಾತುಗಳನ್ನಾಡಿದ್ದಾರೆ. ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ನೇರವಾಗಿ ಹೇಳದ ಉಪ್ಪಿ, ವ್ಯಥಾ ಹಣ ವ್ಯಯ ಮಾಡಬೇಡಿ ಎಂದಷ್ಟೇ ಹೇಳಿದ್ದಾರೆ. ಹುಟ್ಟುಹಬ್ಬದ ದಿನ ಅಭಿಮಾನಿಗಳನ್ನ ಮೀಟ್ ಮಾಡ್ತಾರಾ ಅನ್ನೋದು ಇದೇ 18 ಕ್ಕೆ ಗೊತ್ತಾಗಲಿದೆ.

ಈ ಹಿಂದೆ ಕಿಚ್ಚ ಸುದೀಪ್ ಅವರು ನನ್ನ ಹುಟ್ಟುಹಬ್ಬಕ್ಕೆ ಖರ್ಚು ಮಾಡುವ ಹಣವನ್ನು ಬಡವರಿಗೆ ನೀಡಿದರೆ ಅದೇ ನನಗೆ ನೀಡುವ ಉಡುಗೊರೆ ಎಂದು ಹೇಳಿದ್ದರು. ಅಷ್ಟೇ ಅಲ್ಲದೇ ತನ್ನ ನಿರ್ಧಾರವನ್ನು ಪತ್ರದ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದರು.

ಇದನ್ನೂ ಓದಿ: ಸುದೀಪ್ ಅಭಿಮಾನಿಗಳಿಗೆ ಬರೆದ ಪತ್ರದಲ್ಲಿ ಏನಿದೆ?

ಇದನ್ನೂ ಓದಿ: ಬರ್ತ್ ಡೇ ಯಾಕ್ ಆಚರಿಸಿಕೊಂಡಿಲ್ಲ ಅನ್ನೋ ಅಭಿಮಾನಿಗಳ ಪ್ರಶ್ನೆಗಳಿಗೆ ಸುದೀಪ್ ಉತ್ತರಿಸಿದ್ದು ಹೀಗೆ

Share This Article
Leave a Comment

Leave a Reply

Your email address will not be published. Required fields are marked *