ಕುಟುಂಬ ಸಮೇತ ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಉಪೇಂದ್ರ

Public TV
1 Min Read

ಟ ಉಪೇಂದ್ರ (Upendra) ಹಾಗೂ ಹಿರಿಯ ನಟಿ ತಾರಾ (Tara) ಕುಟುಂಬ ಸಮೇತರಾಗಿ ಮಂತ್ರಾಲಯದ (Mantralaya) ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದಿದ್ದಾರೆ. ಇದನ್ನೂ ಓದಿ:‘ಕಾಂತಾರ ಚಾಪ್ಟರ್ 1’ ಸಿನಿಮಾ ಶೂಟಿಂಗ್ ಮುಗಿಸಿಕೊಟ್ಟಿದ್ದ ರಾಕೇಶ್ ಪೂಜಾರಿ

ಉಪೇಂದ್ರ ಪತ್ನಿ ಪ್ರಿಯಾಂಕಾ ಹಾಗೂ ಮಕ್ಕಳು ಸೇರಿ ಕುಟುಂಬ ಸಮೇತರಾಗಿ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ವಿಶೇಷ ಪೂಜೆ ಸಲ್ಲಿಸಿದ ಬಳಿಕ ನಟ ರಜತ ಗಜವಾಹನೋತ್ಸವದಲ್ಲಿ ಭಾಗಿಯಾಗಿದ್ದಾರೆ. ರಥವನ್ನ ಎಳೆದು ಉಪೇಂದ್ರ ಕುಟುಂಬ ಹರಕೆ ತೀರಿಸಿದೆ. ಇದನ್ನೂ ಓದಿ:ಮೃದು ಸ್ವಭಾವದ ವ್ಯಕ್ತಿತ್ವ ನಿನ್ನದು – ರಾಕೇಶ್ ಪೂಜಾರಿ ನಿಧನಕ್ಕೆ ರಕ್ಷಿತಾ ಸಂತಾಪ

ಈ ವೇಳೆ, ಹಿರಿಯ ನಟಿ ತಾರಾ ವೇಣು ದಂಪತಿ ಕುಟುಂಬ ಸಮೇತರಾಗಿ ಮಂತ್ರಾಲಯದಲ್ಲಿ ವಿಶೇಷ ಪೂಜೆಯನ್ನ ಸಲ್ಲಿಸಿದರು. ಮಂಚಾಲಮ್ಮ ದೇವಿ ಹಾಗೂ ರಾಯರ ವೃಂದಾವನ ದರ್ಶನ ಪಡೆದರು. ಬಳಿಕ ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಉಪೇಂದ್ರ ಹಾಗೂ ತಾರಾ ಕುಟುಂಬಗಳ ಸದಸ್ಯರಿಗೆ ಆಶೀರ್ವಚನ ನೀಡಿ ಸನ್ಮಾನಿಸಿದರು. ಫಲಮಂತ್ರಾಕ್ಷತೆ, ಶೇಷವಸ್ತ್ರ ನೀಡಿ ಆಶೀರ್ವದಿಸಿದರು.

ಅಂದಹಾಗೆ, 45 ಸಿನಿಮಾ, ಭಾರ್ಗವ, ತಲೈವಾ ಜೊತೆಗಿನ ‘ಕೂಲಿ’ ಸಿನಿಮಾ ಸೇರಿದಂತೆ ಹಲವು ಚಿತ್ರಗಳು ಉಪೇಂದ್ರ ಕೈಯಲ್ಲಿವೆ.

Share This Article