ನನ್ನ ವೃತ್ತಿ, ಸಂಭಾವನೆ ಎಲ್ಲ ಬಿಟ್ಟು ಬಂದಿದ್ದೇನೆ: ವಿಜಯ್ ಪವರ್‌ಫುಲ್ ಸ್ಪೀಚ್

Public TV
1 Min Read

ಕಾಲಿವುಡ್ ಸ್ಟಾರ್ ನಟ ವಿಜಯ್ (Vijay Thalapathy) ಅವರು ಬೇಡಿಕೆಯಲ್ಲಿರುವಾಗಲೇ ನಟನೆಗೆ ಗುಡ್ ಬೈ ಹೇಳ್ತಿದ್ದಾರೆ. ಸಿನಿಮಾ ಬಿಟ್ಟು ‘ತಮಿಳಿಗ ವೆಟ್ರಿ ಕಳಗಮ್’ (TVK) ತಮ್ಮದೇ ಸ್ವಂತ ಪಕ್ಷ ಸ್ಥಾಪಿಸಿ ರಾಜಕೀಯದ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇದೀಗ ಪಕ್ಷದ ಮೊದಲ ರ‍್ಯಾಲಿ ಮಾಡಿದ್ದಾರೆ. 5 ಲಕ್ಷಕ್ಕೂ ಹೆಚ್ಚು ಜನರು ಭಾಗಿಯಾಗಿದ್ದ ಈ ರ‍್ಯಾಲಿಯಲ್ಲಿ ವಿಜಯ್ ಪವರ್‌ಫುಲ್ ಆಗಿ ಭಾಷಣ ಮಾಡಿದ್ದಾರೆ. ಹಲವು ವಿಚಾರಗಳ ಕುರಿತು ಮಾತನಾಡಿದ್ದಾರೆ.

ಈ ವೇಳೆ, ನಾನು ನನ್ನ ವೃತ್ತಿ ಜೀವನ ಉತ್ತುಂಗದಲ್ಲಿರುವಾಗ ತೊರೆದೆ. ನನ್ನ ಸಂಪಾದನೆ ತೊರೆದೆ. ನಾನು ಇಲ್ಲಿ ನಿಮ್ಮ ವಿಜಯ್ ಆಗಿ ಇಲ್ಲಿದ್ದೇನೆ. ನಿಮ್ಮನ್ನು ನಂಬಿ ಬಂದಿದ್ದೇನೆ ಎಂದು ವಿಜಯ್ ಮಾತನಾಡಿದ್ದಾರೆ. ಈ ಮೂಲಕ ಸಿನಿಮಾ ಕೆರಿಯರ್‌ ತೊರೆಯುತ್ತಿರುವ ಕುರಿತು ನಟ ಸ್ಪಷ್ಟನೆ ನೀಡಿದ್ದಾರೆ. ಅವರ ಈ ಪವರ್‌ಫುಲ್ ಸ್ವೀಚ್ ವಿಡಿಯೋ ಇದೀಗ ಸಖತ್ ವೈರಲ್ ಆಗಿದೆ. ಇದನ್ನೂ ಓದಿ:ಆದಷ್ಟು ಬೇಗ ದರ್ಶನ್ ಬಿಡುಗಡೆಯಾಗಲಿ: ಹಾಸನಾಂಬೆ ಸನ್ನಿಧಿಯಲ್ಲಿ ತರುಣ್ ಸುಧೀರ್ ಮಾತು

ಇನ್ನೂ ಚೆನ್ನೈನಿಂದ ನೂರು ಕಿಲೋ ಮೀಟರ್ ದೂರದಲ್ಲಿರುವ ವಿಲ್ಲುಪುರಂನಲ್ಲಿ ಈ ರ‍್ಯಾಲಿ ನಡೆದಿದೆ. ಸುಮಾರು 5 ಲಕ್ಷ ಮಂದಿ ರ‍್ಯಾಲಿಯಲ್ಲಿ ಭಾಗವಹಿಸಿದ್ದರು. ರ‍್ಯಾಲಿ ನಡೆದ ಜಾಗದಲ್ಲಿ ಭರ್ಜರಿ ಟ್ರಾಫಿಕ್ ಜಾಮ್ ಆಗಿತ್ತು.

ಅಂದಹಾಗೆ, ದಳಪತಿ ವಿಜಯ್ ಕೊನೆಯ ಸಿನಿಮಾಗೆ ಕನ್ನಡದ ಕೆವಿಎನ್ (KVN Productions) ನಿರ್ಮಾಣ ಸಂಸ್ಥೆ ಬಂಡವಾಳ ಹೂಡುತ್ತಿದೆ. ಈ ಸಿನಿಮಾಗೆ ಪೂಜಾ ಹೆಗ್ಡೆ ನಾಯಕಿಯಾಗಿದ್ದಾರೆ.

Share This Article