ನಟರನ್ನು ಬಚ್ಚಾ ಎಂದಿದ್ದ ಶಾಸಕ ತಿಪ್ಪೇಸ್ವಾಮಿಗೆ ಯಶ್ ತಿರುಗೇಟು

Public TV
1 Min Read

ಬೆಂಗಳೂರು: ನಟ, ಸುದೀಪ್, ಯಶ್ ಇವರೆಲ್ಲ ನನ್ನ ಮುಂದೆ ಇನ್ನು ಬಚ್ಚಾಗಳು ಎಂದು ಹೇಳಿಕೆ ನೀಡಿದ್ದ ಮೊಳಕಾಲ್ಮೂರು ಶಾಸಕ ತಿಪ್ಪೇಸ್ವಾಮಿಗೆ ರಾಕಿಂಗ್ ಸ್ಟಾರ್ ತಿರುಗೇಟು ನೀಡಿದ್ದಾರೆ.

ಬೆಂಗಳೂರು ಹೊರವಲಯ ನೆಲಮಂಗಲ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಎಂ.ವಿ.ನಾಗರಾಜು ಪರ ನಟ ಯಶ್ ಮತಯಾಚನೆ ಮಾಡಿದ್ದಾರೆ. ನಂತರ ತಿಪ್ಪೇಸ್ವಾಮಿ ಯಶ್ ಬಚ್ಚಾ ಎನ್ನುವ ವಿಚಾರದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ರಾಜಕೀಯ ಒಂದು ಗೇಮ್. ಅದು ನಿಜ ಇರಬೇಕು. ಅವರ ವಯಸ್ಸೇನು, ಅವರು ತುಂಬಾ ಹಿರಿಯರು, ಅವರ ಮುಂದೆ ನಾನು ಬಚ್ಚಾನೆ. ಅದನ್ನ ಜನ ಡಿಸೈಡ್ ಮಾಡುತ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಈ ಸುದೀಪ್, ಯಶ್ ಇವರೆಲ್ಲ ನನ್ನ ಮುಂದೆ ಇನ್ನು ಬಚ್ಚಾಗಳು: ತಿಪ್ಪೇಸ್ವಾಮಿ

ರಾಜಕೀಯದಲ್ಲಿ ಒಬ್ಬ ಗೆಲ್ಲಬೇಕಾದರೆ ನಾಲ್ಕು ಜನ ಸೋಲಲೇಬೇಕು. ಶ್ರೀರಾಮುಲು ನನಗೆ ಪರಿಚಯ ಹೀಗಾಗಿ ಅವರ ಹಾಗೂ ನನ್ನ ಅಭಿಮಾನಿಗಳಿಗೋಸ್ಕರ ಪ್ರಚಾರ ಮಾಡಿದೆ. ಜನಕ್ಕೆ ಏನೂ ಮಾಡಬೇಕು ಅನ್ನೋದು ನನ್ನ ಬುದ್ಧಿವಂತಿಕೆ, ವ್ಯವಸ್ಥೆಯನ್ನು ಬದಲಾಯಿಸುವ ನಂಬಿಕೆ ನನ್ನಲ್ಲಿಲ್ಲ. ಶಕ್ತಿವಂತರು, ಬುದ್ಧಿವಂತರು, ಜನರ ಪ್ರೀತಿಗಳಿಸಲು ಪ್ರಯತ್ನ ಪಡುವವರಿಗೆ ನಾನು ಸಹಕಾರಿಯಾಗುತ್ತೇನೆ. ನಾನು ಪ್ರಚಾರ ಮಾಡುವ ಸ್ಥಳಗಳಲ್ಲಿ ವಿರೋಧಿಗಳಿಗೆ ಭಯ ಹುಟ್ಟಿರಬಹುದು ಎಂದು ತಿರುಗೇಟು ನೀಡಿದ್ರು.

ನಾನು ಪ್ರಚಾರ ಮಾಡುತ್ತಿರುವ ಅಭ್ಯರ್ಥಿಗಳ ಗೆಲುವು ಸೋಲಿಗಿಂತ ಹೇಗೆ ಕೆಲಸ ಮಾಡುತ್ತಾರೆ ಎನ್ನುವುದು ಮುಖ್ಯ. ಕಲಾವಿದನಾಗಿ ಜನ ನನಗೆ ಪ್ರೀತಿ ತೋರಿಸುತ್ತಾ ಇದ್ದಾರೆ. ಅದಕ್ಕೆ ನಾನು ಏನು ಮಾಡಬೇಕು ಅಂತಾ ಅವರ ಪರವಾಗಿ ಯೋಚನೆ ಮಾಡುತ್ತಾ ಇದ್ದೇನೆ. ನನಗೆ ಒಳ್ಳೆಯವನು ಕೆಟ್ಟವನು ಅನ್ನಿಸಿಕೊಳ್ಳುವ ಬಗ್ಗೆ ಯೋಚನೆ ಇಲ್ಲ. ಎಸ್ಟೋ ಸಲ ಕೆಟ್ಟೋನು ಎಂದವರು ನಂತರ ಒಳ್ಳೆಯವನು ಅಂದಿದ್ದಾರೆ ಎಂದು ವಿರೋಧಿಗಳಿಗೆ ಯಶ್ ಟಾಂಗ್ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *