ಚೆಲುವಿನ ಚಿತ್ತಾರದ ಬೆಡಗಿ ಅಮೂಲ್ಯ ರಾಜಕೀಯಕ್ಕೆ ಬರ್ತಾರಾ?

Public TV
1 Min Read

ಬೆಂಗಳೂರು: ಸ್ಯಾಂಡಲ್‍ವುಡ್‍ನ ಚೆಲುವಿನ ಚಿತ್ತಾರದ ಬೆಡಗಿ ಅಮೂಲ್ಯ ಜಗದೀಶ್ ರಾಜಕೀಯ ಪ್ರವೇಶ ಮಾಡುತ್ತಾರೆ ಎಂಬ ಸುದ್ದಿಗಳು ಗಾಂಧಿನಗರದ ಗಲ್ಲಿಗಳಲ್ಲಿ ಹರಿದಾಡುತ್ತಿದೆ. ಈ ಸುದ್ದಿಗೆ ಪುಷ್ಠಿ ಎಂಬಂತೆ ಅಮೂಲ್ಯ ಅವರು ಕೂಡ ಇತ್ತೀಚೆಗೆ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ.

ನಟಿ ಅಮೂಲ್ಯ ಮದುವೆ ಬಳಿಕ ಯಾವುದೇ ಸಿನಿಮಾಗಳಲ್ಲಿ ನಟಿಸುತ್ತಿಲ್ಲ. ಪತಿ ಜಗದೀಶ್ ಅವರೊಂದಿಗೆ ಸಾಮಾಜಿಕ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಆರ್.ಆರ್.ನಗರದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿಯೂ ಅಮೂಲ್ಯ ಕಾಣಿಸಿಕೊಂಡಿದ್ದರು.

ರಾಜಕೀಯ ಹಿನ್ನೆಲೆ: ಅಮೂಲ್ಯರ ಮಾವ ರಾಮಚಂದ್ರ ಅವರು ತಮ್ಮನ್ನು ತಾವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಆರ್.ಆರ್. ನಗರದ ಬಿಜೆಪಿಯ ಪ್ರಬಲ ನಾಯಕರಾಗಿದ್ದಾರೆ. ಹೀಗಾಗಿ ತಂದೆಯವರಂತೆ ಜಗದೀಶ್ ಕೂಡ ರಾಜಕೀಯ ವಲಯಕ್ಕೆ ಎಂಟ್ರಿ ನೀಡಲಿದ್ದು, ಇದಕ್ಕೆ ಪತ್ನಿ ಅಮೂಲ್ಯ ಕೂಡ ಸಾಥ್ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಅಮೂಲ್ಯ ಅವರು ಸದ್ಯದಲ್ಲಿ ರಾಜಕೀಯಕ್ಕೆ ಎಂಟ್ರಿ ನೀಡಲ್ಲ. ಒಂದು ವೇಳೆ ಪತಿ ಜಗದೀಶ್ ರಾಜಕೀಯಕ್ಕೆ ಎಂಟ್ರಿ ನೀಡಿದರೆ ಮಾತ್ರ ಅಮೂಲ್ಯ ಬರಬಹುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಆದರೆ ಏನೇ ಇರಲಿ ಅಭಿಮಾನಿಗಳು ಮಾತ್ರ ಅಮೂಲ್ಯರನ್ನು ಬೆಳ್ಳಿ ಪರದೆಯ ಮೇಲೆ ನೋಡಲು ಕಾತುರರಾಗಿದ್ದಾರೆ. ಮೇ 12ರಂದು ಅಮೂಲ್ಯ ಮತ್ತು ಜಗದೀಶ್ ಮದುವೆ ಆಗಿತ್ತು.

ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದಂತೆ ಸ್ಯಾಂಡಲ್‍ವುಡ್ ನಟ-ನಟಿಯರು ರಾಜಕೀಯ ಚಟುವಟಿಕೆಗಳಲ್ಲಿ ಸಕ್ರೀಯವಾಗಿದ್ದು, ಕಳೆದ ವಾರವಷ್ಟೇ ರಿಯಲ್ ಸ್ಟಾರ್ ಉಪೇಂದ್ರ ಹೊಸ ಕೆಪಿಜೆಪಿ ಪಕ್ಷಕ್ಕೆ ಚಾಲನೆ ನೀಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *