ಕಾಪು ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ ನಟಿ ಜಯಪ್ರದಾ

Public TV
1 Min Read

ಡುಪಿ (Udupi) ಜಿಲ್ಲೆಯ  ಕಾಪು (Kapu) ಹೊಸ ಮಾರಿಗುಡಿ ದೇವಸ್ಥಾನಕ್ಕೆ ಮಾಜಿ ಲೋಕಸಭೆ ಹಾಗೂ ಹಾಲಿ ರಾಜ್ಯಸಭೆ ಸದಸ್ಯೆ, ಚಿತ್ರನಟಿ  ಜಯಪ್ರದಾ (Jayaprada) ಭೇಟಿ ನೀಡಿದ್ದಾರೆ. ಮಾರಿಯಮ್ಮ ಉಚ್ಚಂಗಿ ದೇವಿಯ ದರ್ಶನ ಪಡೆದು ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮಾರಿಯಮ್ಮನ ದೇವಸ್ಥಾನವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀನಿವಾಸ ತಂತ್ರಿ ರವರು ದೇವರಲ್ಲಿ ಪ್ರಾರ್ಥಿಸಿ ಜಯಪ್ರಧಾ ಅವರಿಗೆ ಪ್ರಸಾದ ನೀಡಿದರು.

ಕಾಪು ಹೊಸ ಮಾರಿಗುಡಿ (Marigudi Temple) ದೇವರಲ್ಲಿ ಜಯಪ್ರದಾ ಹರಕೆ ಹೊತ್ತಿದ್ದರು ಎಂದು ಹೇಳಲಾಗುತ್ತಿದೆ. ಆ ಹರಕೆಯನ್ನು ತೀರಿಸುವುದಕ್ಕಾಗಿಯೇ ಅವರು ಅಲ್ಲಿಗೆ ಭೇಟಿ ನೀಡಿದ್ದಾರೆ ಎನ್ನಲಾಗುತ್ತಿದೆ. ಸ್ವಲ್ಪ ಹೊತ್ತು ದೇವಸ್ಥಾನದಲ್ಲಿ ಇದ್ದು, ಪೂಜೆ ಸಲ್ಲಿಸಿ ನಂತರ ಅಲ್ಲಿಂದ ತೆರಳಿದ್ದಾರೆ. ಅವರೊಂದಿಗೆ ಅವರ ಆಪ್ತರು ಕೂಡ ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿ ಮಾರಿಗುಡಿ ದೇವರ ಆಶೀರ್ವಾದ ಪಡೆದಿದ್ದಾರೆ. ಇದನ್ನೂ ಓದಿ:ಕಾಂತಾರ 1 ಕೋಟಿ ಟಿಕೆಟ್ಸ್ ಮಾರಾಟ: ದಾಖಲೆಗಳು ಪುಡಿಪುಡಿ

ಈ ಸಂದರ್ಭದಲ್ಲಿ ದೇವಾಲಯದ ಕಾರ್ಯನಿರ್ವಾಣಧಿಕಾರಿ ಪ್ರಶಾಂತ್ ಶೆಟ್ಟಿ , ಆಡಳಿತ ಮುಖ್ಯಸ್ಥರಾದ ರಮೇಶ್ ಹೆಗ್ಡೆ ಕಲ್ಯಾ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಕೆ ವಾಸುದೇವ ಶೆಟ್ಟಿ, ನಡಿಕೆರೆ ರತ್ನಾಕರ ಶೆಟ್ಟಿ, ಉಪಾಧ್ಯಕ್ಷರಾದ ಮಾಧವ ಪಾಲನ್ ,ಗಂಗಾಧರ ಸುವರ್ಣ,ದೇವಿಪ್ರಸಾದ್ ಶೆಟ್ಟಿ,ಕಾಪು ದಿವಾಕರ ಶೆಟ್ಟಿ,ಅನಿಲ್ ಬಳ್ಳಾಲ್, ಮೊದಲಾದವರು ಉಪಸ್ಥಿತರಿದ್ದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *