ತಿಮ್ಮಪ್ಪನ ದೇವಸ್ಥಾನದಲ್ಲಿ ಮದುವೆ ಸುದ್ದಿ ಖಚಿತಪಡಿಸಿದ ಕೀರ್ತಿ ಸುರೇಶ್

Public TV
1 Min Read

ಸೌತ್ ನಟಿ ಕೀರ್ತಿ ಸುರೇಶ್ (Keerthy Suresh) ಅವರು ಪೋಷಕರ ಜೊತೆ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಭೇಟಿ ಕೊಟ್ಟಿದ್ದಾರೆ. ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಮದುವೆ (Wedding) ಸುದ್ದಿ ನಿಜ ಎಂದು ಅಧಿಕೃತವಾಗಿ ನಟಿ ತಿಳಿಸಿದ್ದಾರೆ. ಇದನ್ನೂ ಓದಿ:ಮತ್ತೆ ಹಾಟ್ ಅವತಾರ ತಾಳಿದ ‘ಟೋಬಿ’ ಬೆಡಗಿ ಚೈತ್ರಾ

ತಿರುಮಲದಲ್ಲಿ ತಿಮ್ಮಪ್ಪನ ಸನ್ನಿಧಿಯಲ್ಲಿ ನಟಿ ಮಾತನಾಡಿ, ಮುಂದಿನ ತಿಂಗಳು ವರುಣ್ ಧವನ್ ಜೊತೆಗಿನ ನನ್ನ ಮೊದಲ ಬಾಲಿವುಡ್ ಸಿನಿಮಾ ರಿಲೀಸ್ ಆಗುತ್ತಿದೆ. ಜೊತೆಗೆ ನನ್ನ ಮದುವೆ ಮುಂದಿನ ತಿಂಗಳು ನಡೆಯಲಿದೆ. ಗೋವಾದಲ್ಲಿ ಮದುವೆ ನಡೆಯುತ್ತಿದೆ. ಅದಕ್ಕಾಗಿ ದೇವರ ಆಶೀರ್ವಾದ ಪಡೆಯಲು ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದೇನೆ ಎಂದಿದ್ದಾರೆ. ಈ ಮೂಲಕ ಆಂಟೋನಿ ತಟ್ಟಿಲ್ ಜೊತೆಗಿನ ಮದುವೆ ಸುದ್ದಿಯನ್ನು ನಟಿ ಖಚಿತಪಡಿಸಿದರು.

ಅಂದಹಾಗೆ, 15 ವರ್ಷಗಳ ಬಂಧಕ್ಕೆ ಇದೇ ಡಿ.11ರಂದು ಮದುವೆಯ ಮುದ್ರೆ ಒತ್ತಲಿದ್ದಾರೆ. ಆಂಟೋನಿ ತಟ್ಟಿಲ್ (Antony Thattil) ಜೊತೆ ಕೀರ್ತಿ ಮದುವೆ ಡಿ.11 ಮತ್ತು 12ರಂದು ಗೋವಾದಲ್ಲಿ ಅದ್ಧೂರಿಯಾಗಿ ಜರುಗಲಿದೆ.

Share This Article