ನಟಿ ರಚಿತಾ ರಾಮ್ ಶೃಂಗೇರಿಗೆ ಭೇಟಿ

Public TV
1 Min Read

ಚಿಕ್ಕಮಗಳೂರು: ಡಿಂಪಲ್ ಬೆಡಗಿ ರಚಿತಾ ರಾಮ್ ಶೃಂಗೇರಿಗೆ ಭೇಟಿ ನೀಡಿ ಶಾರದಾಂಬೆಯ ದರ್ಶನ ಪಡೆದಿದ್ದಾರೆ.

ದೇವಸ್ಥಾನಕ್ಕೆ ಬಂದು ಶಾರದಾಂಬೆ ಹಾಗೂ ತೋರಣ ಗಣಪತಿ ದರ್ಶನ ಪಡೆದು ಹೊರನಾಡಿಗೆ ಹೋಗಬೇಕು ಎಂದು ಹಿಂದಿರುಗಿದ್ದಾರೆ.

ರಚಿತಾ ಅವರನ್ನು ನೋಡಿದ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದರು. ಎಲ್ಲರಿಗೂ ಸೆಲ್ಫಿಗೆ ಪೋಸ್ ಕೊಟ್ಟ ರಚಿತಾ, ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದರು. ಅಲ್ಲದೆ “ಪರ್ಸನಲ್ ಆಗಿ ಬಂದಿದ್ದೇನೆ. ಸಾರಿ. ಹೊರನಾಡಿಗೆ ಹೋಗಬೇಕು ತಡವಾಗುತ್ತದೆ” ಎಂದು ಹೇಳಿ ಹೋಗಿದ್ದಾರೆ.

ಕಳೆದ ಐದು ದಿನಗಳಿಂದ ಶೃಂಗೇರಿ ಶಾರದಾಂಭೆ ಸನ್ನಿಧಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಕುಟುಂಬದ ಶ್ರೇಯೋಭಿವೃದ್ಧಿಗಾಗಿ ಸಹಸ್ರ ಚಂಡಿಕಾ ಯಾಗ ಮಾಡಿಸುತ್ತಿದ್ದಾರೆ. ಇಂದು ಯಾಗದ ಪೂರ್ಣಾಹುತಿ ಹಿನ್ನೆಲೆಯಲ್ಲಿ ಇಂದು ದೇವೇಗೌಡರ ಇಡೀ ಕುಟುಂಬವೇ ಶೃಂಗೇರಿಯಲ್ಲಿದೆ.

ಮಾಜಿ ಸಿಎಂ ಕುಮಾರಸ್ವಾಮಿ, ಮಾಜಿ ಸಚಿವ ರೇವಣ್ಣ, ಅನಿತಾ ಕುಮಾರಸ್ವಾಮಿ, ಹೆಚ್.ಡಿ ಬಾಲಕೃಷ್ಣ ಸೇರಿದಂತೆ ದೊಡ್ಡಗೌಡರ ಇಡೀ ಕುಟುಂಬ ಶೃಂಗೇರಿಯಲ್ಲಿದೆ.

Share This Article
Leave a Comment

Leave a Reply

Your email address will not be published. Required fields are marked *