ವೇದಿಕೆಯಲ್ಲೇ ‘ರಾಧಾ ಕಲ್ಯಾಣ’ ಖ್ಯಾತಿಯ ರಾಧಾ ಕಣ್ಣೀರು

Public TV
1 Min Read

ಬೆಂಗಳೂರು: ಇತ್ತೀಚೆಗಷ್ಟೆ ಕಿರುತೆರೆ ನಟಿ ರಾಧಿಕಾ ರಾವ್ ತಮ್ಮ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ರಾಧಿಕಾ ರಾವ್ ತಮ್ಮ ತಾಯಿಯನ್ನು ನೆನಪಿಸಿಕೊಂಡು ವೇದಿಕೆಯ ಮೇಲೆ ಕಣ್ಣೀರು ಹಾಕಿದ್ದಾರೆ.

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಶೋನಲ್ಲಿ ರಾಧಿಕಾ ರಾವ್ ಭಾಗವಹಿಸಿದ್ದಾರೆ. ಈ ಶೋನಲ್ಲಿ ಕುಟುಂಬದ ಬಗ್ಗೆ ಮಾತನಾಡುತ್ತಾ, “ನಾನು ಇಂಡಸ್ಟ್ರೀಗೆ ಬಂದಾಗಿನಿಂದ ತಿಂಗಳಿಗೆ ಎರಡು ಬಾರಿ ಅಮ್ಮನನ್ನು ಭೇಟಿ ಮಾಡುಲು ಹೋಗುತ್ತಿದ್ದೆ. ನಾನು ಮೂಲತಃ ಮಂಗಳೂರು, ಆದರೆ ನಾನು ಬೆಂಗಳೂರಿನಲ್ಲಿದ್ದೇನೆ. ಅಮ್ಮ ಮಂಗಳೂರಿನಲ್ಲಿ ಇದ್ದಾರೆ. ಅಮ್ಮನ ಫೋನಿನಿಂದ ನನ್ನ ಪ್ರತಿದಿನ ಶುರುವಾಗುತ್ತಿತ್ತು” ಎಂದು ವೇದಿಕೆ ಮೇಲೆಯೇ ಕಣ್ಣೀರು ಹಾಕಿದರು.

“ಈಗ ನನಗೆ ಮದುವೆಯಾಗಿದೆ. ಹೀಗಾಗಿ ಪತಿಯ ಕುಟುಂಬವನ್ನು ನೋಡಿಕೊಳ್ಳಬೇಕು. ಅಮ್ಮನನ್ನು ನೋಡಿಕೊಳ್ಳಬೇಕು. ಎರಡು ಕುಟುಂಬವನ್ನು ಹೇಗೇ ನೋಡಿಕೊಳ್ಳುತ್ತೇನೆ ಎಂದು ನನಗೆ ಗೊತ್ತಿಲ್ಲ. ಆದರೆ ನಾನು ಅಮ್ಮನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ” ಎಂದು ಗಳಗಳನೇ ರಾಧಿಕಾ ಅತ್ತಿದ್ದಾರೆ.

ಮೂಲತಃ ಮಂಗಳೂರಿನವರಾಗಿರುವ ರಾಧಿಕಾ ರಾವ್ ಮಾರ್ಚ್ 11ರಂದು ಬುಧವಾರ ತಮ್ಮ ಗೆಳೆಯ ಆಕರ್ಷ್ ಭಟ್ ಜೊತೆ ಸಪ್ತಪದಿ ತುಳಿದಿದ್ದಾರೆ. ಈ ದಂಪತಿಯ ಮದುವೆ ಮೂಡಬಿದಿರೆಯಲ್ಲಿ ಅದ್ಧೂರಿಯಾಗಿ ನಡೆದಿತ್ತು. ಎಂಜಿನಿಯರಿಂಗ್ ಓದಿರುವ ವರ ಆಕರ್ಷ್ ಭಟ್ ಇಂಟರ್ ನ್ಯಾಷನಲ್ ಮ್ಯಾಜಿಷಿಯನ್ ಮತ್ತು ಮೈಂಡ್ ರೀಡರ್ ಆಗಿದ್ದಾರೆ. ಇವರು ಸದ್ಯಕ್ಕೆ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

ರಾಧಿಕಾ ರಾವ್ ಈ ಹಿಂದೆ ‘ಮಂಗಳೂರು ಹುಡ್ಗಿ, ಹುಬ್ಬಳ್ಳಿ ಹುಡ್ಗ’ ಸೀರಿಯಲ್‍ನಲ್ಲಿ ಅಭಿನಯಿಸುತ್ತಿದ್ದರು. ಈ ಸೀರಿಯಲ್‍ನಲ್ಲಿ ಅಮೂಲ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರಿಂದ ಈಕೆ ಅಮುಲ್ಯಾ ಎಂದೇ ಪ್ರೇಕ್ಷಕರಿಗೆ ಚಿರಪರಿಚಿತಾಗಿದ್ದರು. ಈಗ ‘ರಾಧಾ ಕಲ್ಯಾಣ’ ಧಾರವಾಹಿಯಲ್ಲಿ ರಾಧಾ ಪಾತ್ರಧಾರಿಯಾಗಿ ಜನರ ಮನ ಸೆಳೆದಿದ್ದಾರೆ.

 

Share This Article
Leave a Comment

Leave a Reply

Your email address will not be published. Required fields are marked *