ಬಾಯ್ ಫ್ರೆಂಡ್ಸ್ ಗಲಾಟೆ ಕೇಸ್ – ಮೆಸೇಜ್ ಮೂಲಕ ರಾಗಿಣಿ ಪ್ರತಿಕ್ರಿಯೆ

Public TV
1 Min Read

ಬೆಂಗಳೂರು: ಸ್ಯಾಂಡಲ್‍ವುಡ್ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿಯ ಬಾಯ್ ಫ್ರೆಂಡ್ಸ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಮೆಸೇಜ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

ರಾಗಿಣಿ ಈ ವಿವಾದದ ಬಗ್ಗೆ ಪ್ರತಿಕ್ರಿಯಿಸಿ, “ಈ ಘಟನೆ ಶಿವಪ್ರಕಾಶ್ ಹಾಗೂ ರವಿ ಅವರಿಗೆ ಸಂಬಂಧಿಸಿದ ವಿಷಯ. ನಾನು ಈ ಸುದ್ದಿ ನೋಡಿ ಶಾಕ್ ಹಾಗೂ ಬೇಸರದಿಂದ್ದೇನೆ. ನಾನು ಶೂಟಿಂಗ್‍ನಲ್ಲಿ ಬ್ಯುಸಿಯಾಗಿದ್ದೇನೆ. ನನಗೆ ಹಾಗೂ ಈ ಘಟನೆಗೆ ಸಂಬಂಧ ಇಲ್ಲ. ನಾನು ಎಲ್ಲರಂತೆ ಅಲ್ಲಿ ಪ್ರತ್ಯಕ್ಷದರ್ಶಿ ಆಗಿದ್ದೆ” ಎಂದು ಹೇಳಿದ್ದಾರೆ.

ಈ ವಿಚಾರದ ಬಗ್ಗೆ ನಾನು ಕೇವಲ ಪೊಲೀಸರಿಗೆ ಮಾತ್ರ ಉತ್ತರಿಸುತ್ತೇನೆ. ನನಗೆ ಸಂಬಂಧಿಸದ ವಿಷಯದಲ್ಲಿ ನನ್ನನ್ನು ಎಳೆದು ತರುತ್ತಿರುವುದು ಸರಿಯಲ್ಲ. ನನ್ನನ್ನು ಈ ವಿಚಾರದಲ್ಲಿ ಎಳೆದು ತರಬೇಡಿ. ಈ ಘಟನೆಯ ಬಗ್ಗೆ ಯಾರಾದರೂ ನನ್ನ ಫೋಟೋ ಬಳಸಿಕೊಂಡಲ್ಲಿ ಅವರ ವಿರುದ್ಧ ಕ್ರಮಕೈಗೊಳ್ಳಲಾಗುತ್ತದೆ ಎಂದು ರಾಗಿಣಿ ತಿಳಿಸಿದ್ದಾರೆ.

ಏನಿದು ಪ್ರಕರಣ?:
ಬೆಂಗಳೂರಿನ ಖಾಸಗಿ ಹೋಟೆಲ್ ರಿಟ್ಜ್ ಕಾರ್ಲ್ ಟನ್ ನಲ್ಲಿ ಉದ್ಯಮಿ ಶಿವಪ್ರಕಾಶ್ ಚಿಪ್ಪಿ ಹಾಗೂ ಆರ್ ಟಿಒ ಅಧಿಕಾರಿ ರವಿ ಕಿತ್ತಾಡಿಕೊಂಡಿದ್ದರು. ಶನಿವಾರ ರಾತ್ರಿ ಹೋಟೆಲ್ ನಲ್ಲಿ ಶಿವಪ್ರಕಾಶ್ ಪಾರ್ಟಿ ಮಾಡುತ್ತಿದ್ದರು. ಈ ವೇಳೆ ನಟಿ, ತಮ್ಮ ಗೆಳೆಯ ರವಿಯೊಂದಿಗೆ ಹೋಟೆಲ್‍ಗೆ ತೆರಳಿದ್ದರು. ಇದನ್ನು ಕಂಡ ಶಿವಪ್ರಕಾಶ್, ರವಿಯೊಂದಿಗೆ ಕಿರಿಕ್ ಮಾಡಿಕೊಂಡಿದ್ದಾರೆ. ಅಲ್ಲದೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದಾರೆ. ಇಬ್ಬರ ನಡುವೆ ಆರಂಭವಾದ ಜಗಳ ತಾರಕಕ್ಕೇರಿ ಬಳಿಕ ಬಿಯರ್ ಬಾಟಲಿಯಿಂದ ಪರಸ್ಪರ ಬಡಿದಾಡಿಕೊಂಡಿದ್ದಾರೆ. ಘಟನೆಯಿಂದ ಗಾಯಗೊಂಡ ಬಳಿಕ ರವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ನಂತರ ಅಶೋಕ ನಗರ ಪೊಲೀಸ್ ಠಾಣೆಗೆ ತೆರಳಿ ಲಿಖಿತ ದೂರು ನೀಡಿದ್ದಾರೆ. ರವಿ ನೀಡಿದ ದೂರಿನ ಅನ್ವಯ ಪೊಲೀಸರು ಎಫ್‍ಐಆರ್ ದಾಖಲಿಸಿ ಶಿವಪ್ರಕಾಶ್ ರನ್ನು ವಿಚಾರಣೆಗೆ ಒಳಪಡಿಸಿರುವುದಾಗಿ ಪೊಲೀಸ್ ಮೂಲಗಳಿಂದ ತಿಳಿದುಬಂದಿತ್ತು.

ಇವರಿಬ್ಬರು ರಾಗಿಣಿ ವಿಚಾರದಲ್ಲಿ ಕಿತ್ತಾಡಿಕೊಂಡಿದ್ದರು ಎಂದು ವರದಿಯಾಗಿತ್ತು. ಆದರೆ ಈಗ ರಾಗಿಣಿ ಈ ವಿಚಾರಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *