ದರ್ಶನ್‌ ಕಷ್ಟಪಟ್ಟು ಮೇಲೆ ಬಂದಿದ್ರು, ಆದ್ರೆ ಜೀವನ ಹಾಳು ಮಾಡಿಕೊಂಡ್ರು: ರಮ್ಯಾ ಸಾಫ್ಟ್‌ ಕಾರ್ನರ್‌

Public TV
1 Min Read

– ವಿಜಯಲಕ್ಷ್ಮಿ ಪರವೂ ಬ್ಯಾಟ್‌ ಬೀಸಿದ ರಮ್ಯಾ

ಚಿತ್ರರಂಗಕ್ಕೆ ದರ್ಶನ್‌ (Darshan) ಲೈಟ್‌ಬಾಯ್‌ ಆಗಿ ಬಂದ್ರೂ ಕಷ್ಟಪಟ್ಟು ಮೇಲೆ ಬಂದಿದ್ರು. ಆದ್ರೆ ಜೀವನ ಹಾಳುಮಾಡಿಕೊಂಡ್ರು ಅಂತ ನಟಿ ರಮ್ಯಾ (Actress Ramya) ಕೊಲೆ ಆರೋಪಿ ದಚ್ಚು ಬಗ್ಗೆ ಸಾಫ್ಟ್‌ ಕಾರ್ನರ್‌ ತೋರಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ನಟಿ, ನಾನು ಹೇಳಬೇಕಾದ್ದನ್ನೆಲ್ಲ ಹೇಳಿದ್ದೀನಿ. ದೂರು ಕೊಟ್ಮೇಲೆ ಬ್ಯಾಡ್‌ ಕಾಮೆಂಟ್ಸ್‌ ಬರ್ತಿಲ್ಲ. ಎಷ್ಟೋ ಜನ ಪೋನ್ ಸ್ವಿಚ್ ಆಫ್‌ ಮಾಡಿ ಮನೆ ಬಿಟ್ಟಿದ್ದಾರೆ. ಇನ್ನಷ್ಟು ಮಂದಿ ಅರೆಸ್ಟ್ ಆಗಿದ್ದಾರೆ. ದರ್ಶನ್ ಲೈಟ್ ಬಾಯ್ ಆಗಿ ಚಿತ್ರರಂಗಕ್ಕೆ ಬಂದವರಾಗಿದ್ದರೂ ಕಷ್ಟ ಪಟ್ಟು ಈ ಹಂತಕ್ಕೆ ಬಂದಿದ್ರು. ಆದ್ರೆ ಜೀವನ ಹಾಳು ಮಾಡಿಕೊಂಡ್ರು. ಹೀಗೆ ಆಗದೇ ಇದ್ದಿದ್ದರೇ ಇನ್ನಷ್ಟು ದೊಡ್ಡ ಮಟ್ಟಕ್ಕೆ ಬೆಳಿಯಬಹುದಿತ್ತು ಎಂದರಲ್ಲದೇ ಸುಪ್ರೀಂ ಕೋರ್ಟ್‌ ತೀರ್ಪು ಸ್ವಾಗತಿಸುವುದಾಗಿ ಹೇಳಿದರು. ಇದನ್ನೂ ಓದಿ: ವಿಷ್ಣು ಸ್ಮಾರಕ ನಿರ್ಮಿಸೋಕೆ ನಿಮ್ಮ ಜೊತೆ ನಾವಿದ್ದೇವೆ – ಅಭಿಮಾನಿಗಳೊಂದಿಗೆ ನಿಂತ ನಟ ಅನಿರುದ್ಧ

ಮುಂದುವರಿದು… ಸುಪ್ರೀಂ ತೀರ್ಪಿನಿಂದ ರೇಣುಕಾಸ್ವಾಮಿ ಹೆಂಡತಿ ಮಗುವಿಗೆ ನ್ಯಾಯ ಸಿಕ್ಕಿದೆ. ಈ ಬೆಳವಣಿಗೆಯಿಂದ ಹೆಣ್ಣುಮಕ್ಕಳಿಗೆ ಧೈರ್ಯ ಬಂದಿದೆ. ಎಲ್ಲ ಒಳ್ಳೆಯದಾಗಿದೆ ಅಂದುಕೊಳ್ತೀನಿ ಅಂತ ಹೇಳಿದ್ದಾರೆ. ಇದನ್ನೂ ಓದಿ: ಒಳ ಉಡುಪು ಕಾಣುವ ಫೋಟೋ ಹಾಕಿ ಹಲ್‌ಚಲ್ ಎಬ್ಬಿಸಿದ ಖುಷಿ – ಇದೇನು ಸಂಡೇ ಸ್ಪೆಷಲ್ಲಾ ಅಂದ್ರು ಫ್ಯಾನ್ಸ್‌

ಇನ್ನೂ ದರ್ಶನ್‌ ಪತ್ನಿ ವಿಜಯಲಕ್ಷ್ಮಿ, ಸೋಶಿಯಲ್ ಮೀಡಿಯಾ ಹ್ಯಾಂಡಲ್ ಜವಾಬ್ದಾರಿ ಹೊತ್ತ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ನಡೆಯನ್ನು ಸ್ವಾಗತಿಸುತ್ತೀನಿ ಅಂದರು. ಇದು ಒಳ್ಳೆ ಬೆಳವಣಿಗೆ, ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಈ ಮೂಲಕ ಒಳ್ಳೆ ಸಂದೇಶ ಕೊಡಬಹುದು. ಅವರು ಸಹ ಹೆಣ್ಣು, ಹೀಗಾಗಿ ಇದು ಒಳ್ಳೆ ಬೆಳವಣಿಗೆ ಅಂತಿನಿ ಅಂದರು. ಇದನ್ನೂ ಓದಿ: ಬಿಗ್ ಬಾಸ್‌ ವಿಜೇತ ಎಲ್ವಿಶ್ ಮನೆ ಮೇಲೆ 25 ಸುತ್ತು ಗುಂಡಿನ ದಾಳಿ – ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಕೃತ್ಯ

Share This Article