ನಾನು ತಡ ಮಾಡಿದ್ದೇನೆ ಎಂಬುದು ಗೊತ್ತು: ರಶ್ಮಿಕಾ ಮಂದಣ್ಣ

Public TV
1 Min Read

ಬೆಂಗಳೂರು: ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ನಾನು ತಡಮಾಡಿದ್ದೇನೆ ಎಂದು ಹೇಳುವ ಮೂಲವಾಗಿ ದಸರಾ ಶುಭಾಶಯವನ್ನು ಅಭಿಮಾನಿಗಳಿಗೆ ಹೇಳಿದ್ದಾರೆ.

ನಾನು ತಡ ಮಾಡಿದ್ದೇನೆ ಎಂಬುದು ಗೊತ್ತು. ಆದರೂ ದಸರಾ ಹಬ್ಬದ ಶುಭಾಶಯಗಳು. ಹಬ್ಬ ಎಂದರೆ ನಗು ಮತ್ತು ಸಂಭ್ರಮ. ಹಬ್ಬದಲ್ಲಿ ಮಾತ್ರವಲ್ಲದೇ ಸದಾ ಕಾಲ ಖುಷಿ ನೀಡಲು ಬಯಸುತ್ತೇನೆ. ನನ್ನನ್ನು ಅಥವಾ ನನ್ನ ಕೆಲಸವನ್ನು ನೋಡಿದಾಗ ನಿಮ್ಮ ಮುಖದಲ್ಲಿ ಖುಷಿ ಮೂಡಿಸಲು ನಾನು ಬಯಸುತ್ತೇನೆ. ಇದನ್ನು ಹೇಳಬೇಕು ಎನಿಸಿತು. ನೀವೆಲ್ಲರೂ ನನ್ನ ಪಾಲಿನ ಬೆಸ್ಟ್ ವ್ಯಕ್ತಿಗಳು ಎಂದು ಅಭಿಮಾನಿಗಳಿಗೆ ರಶ್ಮಿಕಾ ವಿಶ್ ಮಾಡಿ ಕೆಲವು ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಸ್ಯಾಂಡಲ್‍ವುಡ್‍ನವರಿಂದಲೇ ಕೋಟಿಗೊಬ್ಬನ ಓಟಕ್ಕೆ ತಡೆ – ಜಾಕ್ ಮಂಜು ಆರೋಪ

ಸದ್ಯ ರಶ್ಮಿಕಾ ಸ್ಯಾಂಡಲ್‍ವುಡ್ ಮಾತ್ರವಲ್ಲದೇ ಪರಭಾಷೆಯಲ್ಲಿಯೂ ಬೇಡಿಕೆ ಇರುವ ನಟಿ ಮಣಿಯಾಗಿದ್ದಾರೆ. ರಶ್ಮಿಕಾ ಕೈಯಲ್ಲಿ ಹಲವು ಸಿನಿಮಾಗಳಿವೆ. ಅಲ್ಲು ಅರ್ಜುನ್ ಜೊತೆ ನಟಿಸಿರುವ ಪುಷ್ಪ ಚಿತ್ರ ಡಿಸೆಂಬರ್ 17ರಂದು ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ಅವರು ಶ್ರೀವಲ್ಲಿ ಎಂಬ ಪಾತ್ರ ಮಾಡಿದ್ದಾರೆ. ಇತ್ತೀಚೆಗೆ ಶ್ರೀವಲ್ಲಿ ಪಾತ್ರದ ಪೋಸ್ಟರ್ ಮತ್ತು ಸಾಂಗ್ ಬಿಡುಗಡೆ ಆಗಿತ್ತು. ಪುಷ್ಪ ಚಿತ್ರದಿಂದ ರಶ್ಮಿಕಾ ವೃತ್ತಿಜೀವನಕ್ಕೆ ದೊಡ್ಡ ಮೈಲೇಜ್ ಸಿಗುವ ನಿರೀಕ್ಷೆ ಇದೆ. ಅತ್ತ ಬಾಲಿವುಡ್‍ನಲ್ಲೂ ಕೆಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ರಶ್ಮಿಕಾ ಅವರು ಅಭಿಮಾನಿಗಳ ಬಳಗ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದೀ ಅವರು ವಿಭಿನ್ನವಾಗಿ ಅಭಿಮಾನಿಗಳಿಗೆ ಶುಭಕೊರಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *