ವಿಚ್ಛೇದನ ಪಡೆದ ಬೆನ್ನಲ್ಲೇ ಆಶ್ರಮಕ್ಕೆ ಹೋಗಿದ್ದಾರಾ ಸಮಂತಾ?

Public TV
1 Min Read

ಹೈದರಾಬಾದ್: ಟಾಲಿವುಡ್ ನಟಿ ಸಮಂತಾ, ನಾಗಚೈತನ್ಯ ಅವರಿಂದ ವಿಚ್ಛೇದನ ಪಡೆದ ಬೆನ್ನಲ್ಲೇ ಆಶ್ರಮಕ್ಕೆ ಭೇಟಿಕೊಟ್ಟಿದ್ದಾರೆ ಎನ್ನುವುದಕ್ಕೆ ಸಾಕ್ಷಿಯೆಂಬಂತೆ ಕೆಲವು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.

ದಾಂಪತ್ಯ ಜೀವನದಿಂದ ಹೊರ ಬಂದ ಬೆನ್ನಲ್ಲೇ ಟಾಲಿವುಡ್ ನಟಿ ಸಮಂತಾ ರಿಷಿಕೇಶಕ್ಕೆ ತೆರಳಿದ್ದಾರೆ. ತಾವು ತಂಗಿರುವ ಬೆಟ್ಟಗಳ ನಡುವಿರುವ ರೆಸಾರ್ಟ್‍ನಿಂದ ಮನಮೋಹಕ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಸುಂದರವಾಗಿರುವ ಈಜುಕೊಳದ ಚಿತ್ರವನ್ನೂ ಅವರು ಹಂಚಿಕೊಂಡಿದ್ದು, ಎಲ್ಲರ ಗಮನ ಸೆಳೆದಿದೆ. ಸದ್ಯ ಚರ್ಚೆಯಾಗುತ್ತಿರುವುದು ಸಮಂತಾ ಹಂಚಿಕೊಂಡಿರುವ ಆಶ್ರಮದ ಚಿತ್ರಗಳು. ಆಶ್ರಮವೊಂದರ ದ್ವಾರದ ಹಾಗೂ ಅಲ್ಲಿರುವ ಫಲಕವೊಂದರ ಚಿತ್ರಗಳನ್ನು ಸಮಂತಾ ಪೋಸ್ಟ್ ಮಾಡಿದ್ದು, ಅವರು ಆಶ್ರಮಕ್ಕೆ ತೆರಳಿದ್ದಾರೆಯೇ ಎಂಬ ಪ್ರಶ್ನೆಯನ್ನೂ ಹುಟ್ಟುಹಾಕಿದೆ. ಇದನ್ನೂ ಓದಿ: ಬಿಡುಗಡೆಯಾದ ನಾಲ್ಕೇ ದಿನದಲ್ಲಿ ಕೋಟಿಗೊಬ್ಬ3 ಭರ್ಜರಿ ಕಲೆಕ್ಷನ್‌

Samantha

ರಿಷಿಕೇಶದಲ್ಲಿರುವ ಶ್ರೀ ಸ್ವಾಮಿ ಪುರುಷೋತ್ತಮಾನಂದ ಜೀ ಮಹರಾಜ್ ವಸಿಷ್ಠ್ ಆಶ್ರಮದ ದ್ವಾರದ ಚಿತ್ರವನ್ನು ಸಮಂತಾ ಹಂಚಿಕೊಂಡಿದ್ದಾರೆ. ಜೊತೆಗೆ ಸಂತಸ ಬೇರೆಲ್ಲೂ ಇಲ್ಲ, ನಮ್ಮೊಳಗಿದೆ ಎಂದು ಬರೆದುಕೊಂಡು ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದು, ಸಮಂತಾ ರಜೆಯ ಅವಧಿಯಲ್ಲಿ ಆಶ್ರಮಕ್ಕೂ ತೆರಳಿದ್ದಾರೆ ಎಂದು ಸೋಶಿಯಲ್ ಮೀಡಿಯಾ ಪೋಸ್ಟ್‌ಗಳು ಹೇಳುತ್ತಿವೆ. ಡಿವೋರ್ಸ್ ಕುರಿತು ಹರಿದಾಡುತ್ತಿರುವ ವೈಯಕ್ತಿಕ ದಾಳಿಯ ವಿರುದ್ಧ ಮಾತನಾಡಿ, ಅವುಗಳನ್ನು ಸಂಪೂರ್ಣ ನಿರಾಕರಿಸಿದ್ದರು. ಇದನ್ನೂ ಓದಿ: ನಟ ವಿಕ್ಕಿ ಕೌಶಲ್ ಬೆನ್ನಿನಲ್ಲಿ ಗಾಯ- ನಿಜವಾಗಿ ಆಗಿದ್ದೇನು?

Share This Article
Leave a Comment

Leave a Reply

Your email address will not be published. Required fields are marked *