ಮುಜರಾಯಿ ಇಲಾಖೆ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ

Public TV
1 Min Read

– ಮುಜರಾಯಿ ಇಲಾಖೆ ಆದೇಶ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಐತಿಹಾಸಿಕ ಗಾಳಿ ಆಂಜನೇಯ ಸ್ವಾಮಿ ದೇಗುಲವನ್ನು (Gali Anjaneya Temple) ಮುಜರಾಯಿ ಇಲಾಖೆ (Muzrai Department) ತನ್ನ ವಶಕ್ಕೆ ಪಡೆದುಕೊಂಡು ಆದೇಶ ಹೊರಡಿಸಿದೆ.

ಕಳೆದ ವರ್ಷ ದೇವಸ್ಥಾನದ ಹುಂಡಿ ಹಣ ಎಣಿಸುವಾಗಲೇ ಆಡಳಿತ ಮಂಡಳಿಯ ಸದಸ್ಯರು ಹಣ ಎಗರಿಸಿದ್ದರು. ಹಣ ಎಗರಿಸುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಘಟನೆಯ ಬಗ್ಗೆ ವರದಿ ನೀಡುವಂತೆ ರಾಜ್ಯ ಸರ್ಕಾರ ಮುಜರಾಯಿ ಇಲಾಖೆಗೆ ಸೂಚನೆ ನೀಡಿತ್ತು. ಇದನ್ನೂ ಓದಿ: ಕಪಿಲ್‌ ಶರ್ಮಾ ಕೆಫೆ ಮೇಲೆ ಖಲಿಸ್ತಾನಿ ಭಯೋತ್ಪಾದಕರಿಂದ ಗುಂಡಿನ ದಾಳಿ

ಇದೀಗ ಮುಜರಾಯಿ ಇಲಾಖೆ ರಾಜ್ಯ ಸರ್ಕಾರಕ್ಕೆ ವರದಿ ನೀಡಿದೆ. ವರದಿಯಲ್ಲಿ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ವರ್ಗಾವಣೆಗೆ ಶಿಫಾರಸು ಮಾಡಲಾಗಿದೆ. ಇದನ್ನು ಒಪ್ಪಿದ ಸರ್ಕಾರ 1997ರ 42 ಮತ್ತು 43ರನ್ವಯ ಘೋಷಿತ ಸಂಸ್ಥೆ ಅಂತ ಘೋಷಣೆ ಮಾಡಿದೆ. ಇದನ್ನೂ ಓದಿ: ರೀಲ್ಸ್ ಚಟ – ಟೆನ್ನಿಸ್ ಆಟಗಾರ್ತಿ ಮಗಳನ್ನು ಗುಂಡಿಕ್ಕಿ ಕೊಂದ ತಂದೆ

Share This Article