ಗಂಟೆಗೊಮ್ಮೆ ಇನ್ಸುಲಿನ್ ತಗೋತಿದ್ದಾನೆ – ಸ್ಯಾಂಟ್ರೋ ರವಿ ಕಾಯಿಲೆ ಬಗ್ಗೆ ಮಾಹಿತಿ ನೀಡಿದ ADGP

Public TV
2 Min Read

ಮೈಸೂರು: ಕ್ರಿಮಿನಲ್ ಆರೋಪಿ ಸ್ಯಾಂಟ್ರೋ ರವಿಯನ್ನು (Santro Ravi) ರಾಜ್ಯಕ್ಕೆ ಕರೆತಂದಿರುವ ಪೊಲೀಸರು ಶನಿವಾರ ಪ್ರಾಥಮಿಕ ವಿಚಾರಣೆ ನಡೆಸಿದ್ದಾರೆ. ಎಸಿಪಿ ಶಿವಶಂಕರ್ ವಿಜಯನಗರ ಪೊಲೀಸ್ ಠಾಣೆಯಲ್ಲಿ (VijayaNagara Police Station) ಪ್ರಾಥಮಿಕ ತನಿಖೆ ನಡೆಸಿದ್ದಾರೆ.

ಕಳೆದ ಎರಡು ದಿನಗಳಿಂದ ಮೈಸೂರಿನಲ್ಲೇ ಉಳಿದಿರುವ ಎಡಿಜಿಪಿ (ADGP) ಅಲೋಕ್ ಕುಮಾರ್ (Alok Kumar) ಶನಿವಾರ ವಿಜಯನಗರ ಪೊಲೀಸ್ ಠಾಣೆಗೆ ಆಗಮಿಸಿ ತನಿಖಾಧಿಖಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಮುಂದಾಗಿದ್ದಾರೆ. 

ಪ್ರಾಥಮಿಕ ಮಾಹಿತಿ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್, ವಿಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಕೇಸ್ ಬಗ್ಗೆ ಮಾತ್ರ ಈಗ ವಿಚಾರಣೆ ನಡೆಯುತ್ತಿದೆ. ಬೇರೆ ಯಾವುದೇ ವಿಚಾರಗಳ ಬಗ್ಗೆಯೂ ಆರೋಪಿಯನ್ನ ನಾವು ಪ್ರಶ್ನಿಸಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: 15 ಸಿಮ್‌ ಕಾರ್ಡ್‌ ಬದಲಾಯಿಸಿ, ವಿಗ್‌ ತೆಗೆದು, ಮೀಸೆ ಬೋಳಿಸಿದ್ದ ಸ್ಯಾಟ್ರೋ ರವಿ ಕೊನೆಗೂ ಸಿಕ್ಕಿಬಿದ್ದ

ನಾವು ಪೊಲೀಸ್ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶರನ್ನ ಕೇಳ್ತೀವಿ. ಪೊಲೀಸ್ ಕಸ್ಟಡಿಯಲ್ಲಿ ಹೆಚ್ಚಿನ ವಿಚಾರಣೆ ನಡೆಸುತ್ತೇವೆ. ಸ್ಯಾಂಟ್ರೋ ರವಿ 11 ದಿನ ಎಲ್ಲೆಲ್ಲಿ ಓಡಾಡಿದ್ದ? ಯಾರು-ಯಾರು ಸಹಾಯ ಮಾಡಿದ್ದರು? ಇದರ ಬಗ್ಗೆ ಆರಂಭಿಕ ಮಾಹಿತಿ ಪಡೆಯುತ್ತಿದ್ದೇವೆ. ಸ್ಯಾಂಟ್ರೋ ರವಿ ವಿಚಾರಣೆಗೆ ಸ್ಪಂದಿಸುತ್ತಿದ್ದಾನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಗುಜರಾತ್‌ನಲ್ಲಿ ಬಂಧನ

ಇದೇ ವೇಳೆ ಸ್ಯಾಂಟ್ರೋ ರವಿ ಕಾಯಿಲೆ ಬಗ್ಗೆ ಪ್ರತಿಕ್ರಿಯಿಸಿ, ಸ್ಯಾಂಟ್ರೋ ರವಿಗೆ ಮಧುಮೇಹ (Diabetes) ಕಾಯಿಲೆಯಿದೆ. ಗಂಟೆಗೊಮ್ಮೆ ಇನ್ಸುಲಿನ್ ಪಡೆದುಕೊಳ್ಳುತ್ತಿದ್ದಾನೆ. ಸೂಕ್ತ ಔಷಧಿ ವ್ಯವಸ್ಥೆ ಮಾಡಲು ಸೂಚಿಸಿದ್ದೇನೆ. ಅವನಿಗೆ ಡಯಾಬಿಟಿಕ್ ಬಿಟ್ಟರೆ ಅಂತಹ ಸಮಸ್ಯೆ ಇಂದಂತೆ ಕಾಣ್ತಿಲ್ಲ. ಸ್ಯಾಂಟ್ರೋ ರವಿ ಸೇರಿದಂತೆ ಇನ್ನೂ ನಾಲ್ವರ ವಿಚಾರಣೆ ನಡೆಸುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಸ್ಯಾಂಟ್ರೋ ರವಿ ಬಂಧಿಸಿದ್ದು ಹೇಗೆ?
4 ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ 11 ತಂಡಗಳಾಗಿ ಪೊಲೀಸರು ಸ್ಯಾಂಟ್ರೋಗಾಗಿ ಹುಡುಕಾಟ ನಡೆಸಿದ್ದರು. ಆತ ಪದೇ ಪದೇ ಸಿಮ್ ಕಾರ್ಡ್ಗಳನ್ನು ಬದಲಿಸುತ್ತಿದ್ದ. ಒಮ್ಮೆ ಬಳಸಿದ ಸಿಮ್ ಅನ್ನು ಆತ ಮತ್ತೊಮ್ಮೆ ಬಳಸುತ್ತಿರಲಿಲ್ಲ. ಅಷ್ಟೇ ಅಲ್ಲದೇ ಆನ್‌ಲೈನ್ ಖಾತೆಯ ಮೂಲಕ ಎಲ್ಲಿಯೂ ವ್ಯವಹಾರ ನಡೆಸಿರಲಿಲ್ಲ. ಇದರಿಂದ ಪೊಲೀಸರಿಗೆ ಆತನನ್ನು ಪತ್ತೆಹಚ್ಚುವುದು ಸವಾಲಾಗಿತ್ತು. ಗುರುವಾರ ರಾತ್ರಿ ಗುಜರಾತ್‌ನ ಪ್ರತಿಷ್ಠಿತ ಹೋಟೆಲ್ ಒಂದರಲ್ಲಿ ರವಿ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರ ತಂಡ ಶುಕ್ರವಾರ ಮಧ್ಯಾಹ್ನ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಬ್ಬರು ಐಪಿಎಸ್ ತಂಡಗಳ ನೇತೃತ್ವದಲ್ಲಿ ಸ್ಯಾಂಟ್ರೋ ರವಿಯನ್ನು ಪೊಲೀಸರು ಬಂಧಿಸಿ, ಮೈಸೂರಿಗೆ ಕರೆತಂದಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *