ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕಟ್ಟುನಿಟ್ಟಿನ ಕ್ರಮ; ಅಪಘಾತಗಳ ಸಂಖ್ಯೆ ಇಳಿಕೆ

Public TV
2 Min Read

ರಾಮನಗರ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ (Bengaluru-Mysuru Expressway) ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದರಿಂದ ಅಪಘಾತಗಳ ಸಂಖ್ಯೆ ಇಳಿಕೆಯಾಗಿದೆ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ (Alok Kumar) ಟ್ವೀಟ್‌ ಮಾಡಿದ್ದಾರೆ.

ಪೊಲೀಸರ ಕಟ್ಟುನಿಟ್ಟಿನ ಕ್ರಮದಿಂದಾಗಿ ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತಗಳಿಂದ ಉಂಟಾಗುತ್ತಿದ್ದ ಸಾವಿನ ಸಂಖ್ಯೆ ಇಳಿಮುಖವಾಗಿದೆ. ಜು.23 ರ ಹೊತ್ತಿಗೆ ಸಾವಿನ ಸಂಖ್ಯೆ 8 ಕ್ಕೆ ಇಳಿದಿದೆ. ಮೇ ತಿಂಗಳಲ್ಲಿ 29 ಸಾವುಗಳಾಗಿದ್ದವು. ಜೂನ್‌ ತಿಂಗಳಲ್ಲಿ 28 ಮಂದಿ ಮೃತಪಟ್ಟಿದ್ದರು. ಹೆಚ್ಚಿನ ಅಪಘಾತಗಳಿಗೆ ಅತಿ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಕಾರಣ. ಸಾವಿನ ಸಂಖ್ಯೆ ಒಂದಂಕಿಗೆ ಇಳಿಯಲು ಕಾರಣರಾದ ನಮ್ಮ ಪೊಲೀಸ್‌ ಸಿಬ್ಬಂದಿಗೆ ಅಭಿನಂದನೆ ಎಂದು ಟ್ವೀಟ್‌ ಮಾಡಿ ಎಡಿಜಿಪಿ ಕೃತಜ್ಞತೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಎಕ್ಸ್‌ಪ್ರೆಸ್‌ವೇಯಲ್ಲಿ ಬೈಕ್, ಆಟೋ ನಿಷೇಧ – ಮೊದಲ ದಿನವೇ 137 ಕೇಸ್

ಜುಲೈ ತಿಂಗಳಲ್ಲಿ ದಶಪಥ ರಸ್ತೆಯಲ್ಲಿ ಅಪಘಾತಗಳ ಸಾವಿನ ಸಂಖ್ಯೆ 8 ಕ್ಕೆ ಇಳಿದಿದೆ. ರಾಮನಗರ ವ್ಯಾಪ್ತಿಯಲ್ಲಿ 3, ಮಂಡ್ಯ ವ್ಯಾಪ್ತಿಯಲ್ಲಿ 5 ಮಂದಿ ಮೃತಪಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಅಪಘಾತಗಳ ಸಂಖ್ಯೆ ಮತ್ತಷ್ಟು ಇಳಿಮುಖ ಆದರೆ ವೇಗದ ಮಿತಿ ಏರಿಕೆಗೆ ಚಿಂತನೆ ನಡೆಸಲಾಗಿದೆ. ಪ್ರತಿ ಗಂಟೆಗೆ 100 ರಿಂದ 120 ಕಿ.ಮೀಗೆ ಏರಿಸಲು ಪೊಲೀಸ್ ಇಲಾಖೆ ಚಿಂತನೆ ನಡೆಸಿದೆ.

ದಶಪಥ ಹೆದ್ದಾರಿಯಲ್ಲಿ ಹೆಚ್ಚುತ್ತಿದ್ದ ಅಪಘಾತ ಸಂಖ್ಯೆಗಳನ್ನು ನಿಯಂತ್ರಿಸಲು ಹಲವಾರು ಕ್ರಮ ಕೈಗೊಳ್ಳಲಾಗಿತ್ತು. ಎಕ್ಸ್‌ಪ್ರೆಸ್‌ವೇನಲ್ಲಿ ಪೊಲೀಸರ ನಿಯೋಜನೆ, ಎಐ ಕ್ಯಾಮೆರಾ ಅಳವಡಿಕೆ, ವಾಹನಗಳ ವೇಗಕ್ಕೆ ಮಿತಿ, ದ್ವಿಚಕ್ರ ಹಾಗೂ ತ್ರಿಚರ್ಕ ವಾಹನಗಳ ಸಂಚಾರಕ್ಕೆ ನಿರ್ಬಂಧ ಸೇರಿದಂತೆ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದನ್ನೂ ಓದಿ: ಎಕ್ಸ್‌ಪ್ರೆಸ್‌ವೇಯಲ್ಲಿ AI ಕ್ಯಾಮೆರಾ – ಇಷ್ಟಬಂದಂತೆ ವಾಹನ ಚಲಾಯಿಸಿದ್ರೆ ಬೀಳುತ್ತೆ ದಂಡ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್