ಆದಿಚುಂಚನಗಿರಿಯಲ್ಲಿ ಅದ್ಧೂರಿ ರಥೋತ್ಸವ – ಸಾವಿರಾರು ಭಕ್ತರಿಂದ ಜೈಕಾರ

Public TV
1 Min Read

ಮಂಡ್ಯ: ಕೊರೋನಾ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಸರಳವಾಗಿ ಜರುಗಿದ್ದ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯ ಗಂಗಾಧರೇಶ್ವರಸ್ವಾಮಿಯ ಮಹಾರಥೋತ್ಸವ ಇಂದು ಮುಂಜಾನೆ 4.58ರ ಬ್ರಾಹ್ಮೀ ಮುಹೂರ್ತದಲ್ಲಿ ಅದ್ದೂರಿಯಾಗಿ ಜರುಗಿತು.

ರಥೋತ್ಸವದಲ್ಲಿ ಲಕ್ಷಾಂತರ ಮಂದಿ ಭಕ್ತರು ಭಾಗಿಯಾಗಿದ್ದು, ಕಾಲಭೈರವೇಶ್ವ ಮತ್ತು ಗಂಗಾಧರೇಶ್ವರಸ್ವಾಮಿಗೆ ಜೈಕಾರ ಕೂಗಿದ್ರು. ರಥೋತ್ಸವದ ವೇಳೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಅಡ್ಡಪಲ್ಲಕ್ಕಿಯಲ್ಲಿ ಕೂರಿಸಿ ಮೆರವಣಿಗೆ ಮಾಡಲಾಯಿತು. ಇದನ್ನೂ ಓದಿ: ಬೊಮ್ಮಾಯಿ ಸಚಿವರ ನಡುವೆ ಟಾಕ್ ಫೈಟ್- ತಹಶೀಲ್ದಾರ್ ವರ್ಗಾವಣೆ ವಿಚಾರಕ್ಕೆ ಕಿತ್ತಾಟ

ರಥೋತ್ಸವ ಹಿನ್ನೆಲೆ ಇಡೀ ಆದಿಚುಂಚನಗಿರಿ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದು, ಇತ್ತ ಬಾನೆತ್ತರಕ್ಕೆ ಬಾಣ ಬಿರುಸುಗಳು ಚಿಮ್ಮುತ್ತಿದ್ದವು. ಒಟ್ಟಿನಲ್ಲಿ ಕೊರೊನಾ ನಂತರ ಮಹಾರಥೋತ್ಸವವನ್ನು ಭಕ್ತರು ಕಣ್ತುಂಬಿಕೊಂಡರು.

Share This Article
Leave a Comment

Leave a Reply

Your email address will not be published. Required fields are marked *