ತಂಬಾಕು ಸೇವನೆ ಬಿಡುವಂತೆ ಬುದ್ಧಿವಾದ – ಯುವತಿ ನೇಣಿಗೆ ಶರಣು

Public TV
1 Min Read

ಹಾವೇರಿ: ತಂಬಾಕು (Tobacco) ಸೇವನೆ ಬಿಡುವಂತೆ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ನೇಣಿಗೆ ಶರಣಾದ ಘಟನೆ ಹಾವೇರಿ (Haveri) ತಾಲೂಕಿನ ಕರ್ಜಗಿ (Karjagi) ಗ್ರಾಮದ ರೈಲ್ವೆ ಸ್ಟೇಷನ್ ಬಳಿ ನಡೆದಿದೆ.

ಮೃತ ಯುವತಿಯನ್ನು ಬೀಬಿಜಾನ್ ಸೊಂಡಿ (18) ಎಂದು ಗುರುತಿಸಲಾಗಿದೆ. ಮನೆಗೆಲಸ ಮಾಡುತ್ತಿದ್ದ ಯುವತಿ ಕಳೆದ ಕೆಲವು ದಿನಗಳಿಂದ ತಂಬಾಕು ಸೇವನೆ ಚಟಕ್ಕೆ ಅಂಟಿಕೊಂಡಿದ್ದಳು. ತಂಬಾಕು ಸೇವನೆ ಮಾಡುವುದನ್ನು ಬಿಡುವಂತೆ ಬೀಬಿಜಾನ್‌ಗೆ ತಂದೆ ತಾಯಿ ಬುದ್ಧಿವಾದ ಹೇಳಿದ್ದರು. ತಂದೆ ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಯುವತಿ ನೇಣಿಗೆ ಶರಣಾಗಿದ್ದಾಳೆ. ಇದನ್ನೂ ಓದಿ: ಜನರ ನಂಬಿಕೆಯನ್ನು ಉಳಿಸಿದರೆ ಚಾನೆಲ್‌ ಗಟ್ಟಿಯಾಗಿ ನಿಲ್ಲುತ್ತದೆ: ಡಿಕೆ ಶಿವಕುಮಾರ್‌

ಮನೆಯಲ್ಲೇ ಯುವತಿ ನೇಣಿಗೆ ಶರಣಾಗಿದ್ದಾಳೆ. ಘಟನೆ ಸಂಬಂಧ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಭಾರತೀಯ ಸೇನೆಯ ಅವಹೇಳನ ಆರೋಪ – ರಾಹುಲ್ ಗಾಂಧಿಗೆ ಲಕ್ನೋ ಕೋರ್ಟ್‌ ಸಮನ್ಸ್

Share This Article