ಅಜಾದ್‌ ಬೆನ್ನಲ್ಲೇ ಕಾಂಗ್ರೆಸ್‌ನ ಮಹತ್ವದ ಹುದ್ದೆಗೆ ಆನಂದ್‌ ಶರ್ಮಾ ರಾಜೀನಾಮೆ

Public TV
1 Min Read

ನವದೆಹಲಿ: ಗುಲಾಂ ನಬಿ ಅಜಾದ್‌ ಬೆನ್ನಲ್ಲೇ ಕೇಂದ್ರದ ಮಾಜಿ ಸಚಿವ ಆನಂದ್ ಶರ್ಮಾ ಅವರು ಹಿಮಾಚಲ ಪ್ರದೇಶ ಕಾಂಗ್ರೆಸ್‌ನ ಸಂಚಾಲಕ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ. ಸಮಾಲೋಚನೆ ಪ್ರಕ್ರಿಯೆಯಲ್ಲಿ ತಮ್ಮನ್ನು ಕಡೆಗಣಿಸಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕಾಂಗ್ರೆಸ್‌ನ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅರು ರಾಜೀನಾಮೆ ನೀಡಿದ 5 ದಿನದ ಬಳಿಕ ಆನಂದ್‌ ಶರ್ಮಾ ರಾಜೀನಾಮೆ ನೀಡಿದ್ದಾರೆ. ಆಜಾದ್ ಅವರು ಆಗಸ್ಟ್ 16 ರಂದು ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ಪ್ರಚಾರ ಸಮಿತಿಯ ಮುಖ್ಯಸ್ಥರ ಹುದ್ದೆಗೆ ರಾಜೀನಾಮೆ ನೀಡಿದ್ದರು.  ಇದನ್ನೂ ಓದಿ: ಕಾಂಗ್ರೆಸ್ ನಾಯಕ ಆನಂದ್ ಶರ್ಮಾ, ಜೆಪಿ ನಡ್ಡಾ ಭೇಟಿ- ಬಿಜೆಪಿ ಸೇರ್ಪಡೆ?

ರಾಜೀನಾಮೆ ನೀಡಿದ್ದರೂ ರಾಜ್ಯದಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ ಎಂದು ಆನಂದ್‌ ಸಿಂಗ್‌ ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಕಾಂಗ್ರೆಸ್‌ನ ಉಪ ನಾಯಕನಾಗಿರುವ ಶರ್ಮಾ ಅವರನ್ನು ಏಪ್ರಿಲ್ 26 ರಂದು ಹಿಮಾಚಲ ಪ್ರದೇಶದ ಸಂಚಾಲಕ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು

ಆಜಾದ್‌, ಆನಂದ್‌ ಶರ್ಮಾ, ಭೂಪಿಂದರ್ ಸಿಂಗ್ ಹೂಡಾ ಮತ್ತು ಮನೀಶ್ ತಿವಾರಿ ಸೇರಿದಂತೆ ಹಿರಿಯ ನಾಯಕರು ಕಾಂಗ್ರೆಸ್‌ ಪಕ್ಷದ ಬಲವರ್ಧನೆಗೆ ಆಂತರಿಕ ಚುನಾವಣೆ ನಡೆಸಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಈ ವರ್ಷಾಂತ್ಯದಲ್ಲಿ ಹಿಮಾಚಲ ಪ್ರದೇಶದಲ್ಲಿ ಚುನಾವಣೆ ನಡೆಯಲಿದ್ದು ಆಡಳಿತಾರೂಢ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್‌ ಹರಸಾಹಸ ಪಡುತ್ತಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *