ಅಫ್ಘಾನ್ ಪ್ರಧಾನಿ ಬಳಿಕ ಹೆಚ್ಚು ಪ್ರಸಿದ್ಧಿ ಪಡೆದಿದ್ದೇನೆ – ರಶೀದ್ ಖಾನ್

Public TV
2 Min Read

ಮುಂಬೈ: 2018 ರ ಐಪಿಎಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆ ಗಳಿಸಿರುವ ರಶೀದ್ ಖಾನ್, ತನ್ನ ದೇಶದ ಪ್ರಧಾನಿಯ ಬಳಿಕ ತಾನು ಹೆಚ್ಚು ಪ್ರಸಿದ್ಧಿ ಪಡೆದಿರುವುದಾಗಿ ಹೇಳಿದ್ದಾರೆ.

ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಪರ ಅತ್ಯುತ್ತಮ ಆಲೌಂಡರ್ ಪ್ರದರ್ಶನ ನೀಡಿದ ರಶೀದ್ ತಂಡ ಫೈನಲ್ ತಲುಪಲು ಕಾರಣರಾಗಿದ್ದರು. ಈ ವೇಳೆ ಸಚಿನ್ ತೆಂಡೂಲ್ಕರ್ ಸಹ ವಿಶ್ವದ ಉತ್ತಮ ಟಿ20 ಬೌಲರ್ ಎಂದು ಹೊಗಳಿಕೆ ನೀಡಿದ್ದರು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಖಾನ್ ಮೊದಲು ಸಚಿನ್ ರ ಹೊಗಳಿಕೆ ಟ್ವೀಟ್ ನೋಡಿದ ವೇಳೆ ನಂಬಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದ್ದಾರೆ.

ಸಚಿನ್ ವಿಶ್ವದಲ್ಲೇ ಹೆಚ್ಚು ಅಭಿಮಾನಿಗಳನ್ನು ಪಡೆದ ಆಟಗಾರರು. ಅವರ ಟ್ವೀಟನ್ನು ಅಫ್ಘಾನ್ ನ ಎಲ್ಲರೂ ನೋಡಿರುತ್ತಾರೆ. ಸಚಿನ್ ರ ಹೊಗಳಿಕೆ ತನ್ನಂತಹ ಹಲವು ಯುವ ಆಟಗಾರರಿಗೆ ಹೆಚ್ಚು ಪ್ರೇರಣೆ ನೀಡುತ್ತದೆ ಎಂದು ಹೇಳಿದ್ದಾರೆ.

ಈ ಬಾರಿಯ ಐಪಿಎಲ್ ನಲ್ಲಿ 21 ವಿಕೆಟ್ ಪಡೆದಿರುವ ಖಾನ್ ಟೂರ್ನಿಯಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಎರಡನೇ ಬೌಲರ್ ಎಂಬ ಹೆಗ್ಗಳಿಕೆ ಪಡೆದರು. ವಿಶೇಷವಾಗಿ ಟೂರ್ನಿಯಲ್ಲಿ ಧೋನಿ, ಎಬಿ ಡಿವಿಲಿಯರ್ಸ್, ವಿರಾಟ್ ಕೊಹ್ಲಿ ವಿಕೆಟ್ ಪಡೆದಿರುವುದು ಹೆಚ್ಚು ಹೆಮ್ಮೆ ಎನಿಸುತ್ತದೆ. ಈ ಮೂರು ವಿಕೆಟ್ ಗಳು ತನ್ನ ವೃತ್ತಿ ಜೀವನದ ಪ್ರಮುಖ ಸಾಧನೆ ಎಂದು ತಿಳಿಯುತ್ತೇನೆ ಎಂದು ಹೇಳಿದ್ದಾರೆ.

ಮುಂದಿನ ಜೂನ್ ನಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಟೆಸ್ಟ್ ಪಂದ್ಯದ ಮೂಲಕ ಅಫ್ಘಾನ್ ತಂಡ ಮೊದಲ ಅಂತರಾಷ್ಟ್ರೀಯ ಟೆಸ್ಟ್ ಗೆ ಪಾದಾರ್ಪಣೆ ಮಾಡಲಿದೆ. ಈ ಪಂದ್ಯ ಅತ್ಯಂತ ಮಹತ್ವದಾಗಿದ್ದು, ಇಡೀ ದೇಶವೇ ಎದುರು ನೋಡುತ್ತಿದೆ. ಈ ಪಂದ್ಯಕ್ಕೆ ಆಯ್ಕೆ ಆಗಿರುವ ಎಲ್ಲರು ಲಕ್ಕಿ ಆಟಗಾರರಾಗಿದ್ದು, ಈ ಮೂಲಕ ಇತಿಹಾಸ ಬರೆಯಲಿದ್ದೇವೆ. ಎಲ್ಲಕ್ಕಿಂತ ಹೆಚ್ಚಾಗಿ ನಾವು ಟೀಂ ಇಂಡಿಯಾ ವಿರುದ್ಧ ಆಡುತ್ತಿದ್ದೇವೆ ಎಂಬುವುದೆ ಹೆಮ್ಮೆ ಸಂಗತಿ ಎಂದು ತಿಳಿಸಿದ್ದಾರೆ.

ಈ ವೇಳೆ ಭಾರತ ಸ್ಟಾರ್ ಆಟಗಾರರು ಪಡೆಯುವ ಸೌಲಭ್ಯಗಳನ್ನು ಪಡೆದಿರುವ ಕುರಿತ ಪ್ರಶ್ನೆಗೆ ಉತ್ತರಿಸಿ ತಾನು ಅಫ್ಘಾನ್ ದೇಶದ ಪ್ರಧಾನಿ ಬಳಿಕ ಹೆಚ್ಚು ಪ್ರಸಿದ್ಧಿ ಪಡೆದಿದ್ದೇನೆ ಎಂದು ಉತ್ತರಿಸಿದ್ದಾರೆ. ಸದ್ಯ ಅಫ್ಘಾನ್ ನಂತಹ ದೇಶದ ಯುವ ಜನತೆಗೆ ರಶೀದ್ ಖಾನ್ ಈಗ ಸ್ಫೂರ್ತಿಯಾಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *