ಲಕ್ನೋ: ಯೋಗಿ ಆದಿತ್ಯನಾಥ್ (Yogi Adityanath) ಮುಖ್ಯಮಂತ್ರಿ ಆದ ಬಳಿಕ ಉತ್ತರ ಪ್ರದೇಶದಲ್ಲಿ (Uttara Pradesh) ಇದುವರೆಗೆ 15,000 ಎನ್ಕೌಂಟರ್ಗಳಾಗಿವೆ. ಆ ಪೈಕಿ 238 ಮಂದಿ ಹತ್ಯೆಯಾಗಿದ್ದಾರೆ.
2017 ರಿಂದ ಉತ್ತರ ಪ್ರದೇಶ ಪೊಲೀಸರು ಸುಮಾರು 15,000 ಎನ್ಕೌಂಟರ್ಗಳನ್ನು ದಾಖಲಿಸಿದ್ದಾರೆ. ಇದರಲ್ಲಿ 30,000 ಕ್ಕೂ ಹೆಚ್ಚು ಅಪರಾಧಿಗಳನ್ನು ಬಂಧಿಸಲಾಗಿದೆ. 9,000 ಕ್ಕೂ ಹೆಚ್ಚು ಜನರ ಕಾಲಿಗೆ ಗುಂಡೇಟು ಬಿದ್ದಿದೆ. ಪರಾರಿಯಾಗಲು ಪ್ರಯತ್ನಿಸಿದವರು, ಮತ್ತೆ ಮತ್ತೆ ಅಪರಾಧ ಕೃತ್ಯಗಳಲ್ಲಿ ಪಾಲ್ಗೊಂಡವರನ್ನು ಗುರಿಯಾಗಿಸಿ ನಡೆಸಿದ ಕಾರ್ಯಾಚರಣೆಗಳಲ್ಲಿ 238 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಇದು ಸೂಕ್ಷ್ಮ ವಿಷಯ, ಭಾರತ ಅಗತ್ಯವಿರುವ ಎಲ್ಲಾ ಸಹಾಯ ನೀಡುತ್ತಿದೆ: ಕೇರಳ ನರ್ಸ್ ಪ್ರಕರಣದ ಬಗ್ಗೆ MEA ಪ್ರತಿಕ್ರಿಯೆ
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿರ್ದೇಶನದಂತೆ ಇಲಾಖೆಯು ಅಪರಾಧಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ ಎಂದು ಪೊಲೀಸ್ ಮಹಾನಿರ್ದೇಶಕ ರಾಜೀವ್ ಕೃಷ್ಣ ತಿಳಿಸಿದ್ದಾರೆ.
ಕಳೆದ ಎಂಟು ವರ್ಷಗಳಲ್ಲಿ 14,973 ಕಾರ್ಯಾಚರಣೆಗಳನ್ನು ನಡೆಸಲಾಗಿದೆ. ಇದರ ಪರಿಣಾಮವಾಗಿ 30,694 ಅಪರಾಧಿಗಳನ್ನು ಬಂಧಿಸಲಾಗಿದೆ. ಅವರಲ್ಲಿ ಪೊಲೀಸರ ಮೇಲೆ ದಾಳಿ ಮಾಡಿದ 9,467 ಜನರ ಕಾಲಿಗೆ ಗುಂಡು ಹಾರಿಸಲಾಗಿದೆ. ಆದರೆ, 238 ಜನರು ಎನ್ಕೌಂಟರ್ಗಳಲ್ಲಿ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಸಿಎಂ ನಿತೀಶ್ ಕುಮಾರ್ ಪಕ್ಷದ ನಾಯಕನ ಬರ್ಬರ ಹತ್ಯೆ – ನಾಲ್ಕೇ ದಿನಗಳಲ್ಲಿ 2ನೇ ರಾಜಕೀಯ ಹತ್ಯೆ
ಪಶ್ಚಿಮ ಉತ್ತರ ಪ್ರದೇಶದ ಮೀರತ್ ವಲಯದಲ್ಲಿ ಅತಿ ಹೆಚ್ಚು ಕೃತ್ಯಗಳು ನಡೆದಿವೆ. ಅಲ್ಲಿ 7,969 ಅಪರಾಧಿಗಳನ್ನು ಬಂಧಿಸಲಾಗಿದ್ದು, 2,911 ಮಂದಿ ಗಾಯಗೊಂಡಿದ್ದಾರೆ. ಆಗ್ರಾ ವಲಯದಲ್ಲಿ 5,529 ಅಪರಾಧಿಗಳನ್ನು ಬಂಧಿಸಲಾಗಿದ್ದು, 741 ಮಂದಿ ಗಾಯಗೊಂಡಿದ್ದಾರೆ. ಬರೇಲಿ ವಲಯದಲ್ಲಿ 4,383 ಅಪರಾಧಿಗಳನ್ನು ಬಂಧಿಸಲಾಗಿದ್ದು, 921 ಮಂದಿ ಗಾಯಗೊಂಡಿದ್ದಾರೆ. ವಾರಣಾಸಿ ವಲಯದಲ್ಲಿ ಪೊಲೀಸರು 2,029 ಅಪರಾಧಿಗಳನ್ನು ಬಂಧಿಸಲಾಗಿದ್ದು, 620 ಮಂದಿ ಗಾಯಗೊಂಡಿದ್ದಾರೆ ಎಂದು ಡಿಜಿಪಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಮಿಷನರೇಟ್ ಪ್ರದೇಶಗಳಲ್ಲಿ ಗೌತಮ್ ಬುದ್ಧ ನಗರದಲ್ಲಿ ಅತಿ ಹೆಚ್ಚು ಬಂಧನಗಳು ದಾಖಲಾಗಿವೆ. 1,983 ಅಪರಾಧಿಗಳು ಸಿಕ್ಕಿಬಿದ್ದಿದ್ದು, 1,180 ಜನರು ಗಾಯಗೊಂಡಿದ್ದಾರೆ. ಗಾಜಿಯಾಬಾದ್ ಕಮಿಷನರೇಟ್ನಲ್ಲಿ 1,133 ಜನರನ್ನು ಬಂಧಿಸಲಾಗಿದ್ದು, 686 ಜನರು ಗಾಯಗೊಂಡಿದ್ದಾರೆ. ಆಗ್ರಾ ಕಮಿಷನರೇಟ್ನಲ್ಲಿ 1,060 ಅಪರಾಧಿಗಳನ್ನು ಬಂಧಿಸಲಾಗಿದ್ದು, 271 ಜನರು ಗಾಯಗೊಂಡಿದ್ದಾರೆ ಎಂದು ವಿವರಿಸಿದ್ದಾರೆ.