ಅಗ್ನಿಪಥ್ ಯೋಜನೆ ವಿರೋಧಿಗಳು ರೈಲಿಗೆ ಬೆಂಕಿ ಹಚ್ಚಿಲ್ಲ, ಇಡಿ ದೇಶಕ್ಕೆ ಬೆಂಕಿ ಹಚ್ಚಿದ್ದಾರೆ: ಈಶ್ವರಪ್ಪ

Public TV
1 Min Read

ಶಿವಮೊಗ್ಗ: ಅಗ್ನಿಪಥ್ ಯೋಜನೆ ವಿರೋಧಿಗಳು ಕೇವಲ ರೈಲು ಸುಟ್ಟಿಲ್ಲ, ಇಡಿ ದೇಶಕ್ಕೆ ಬೆಂಕಿ ಹಚ್ಚಿದ್ದಾರೆ. ಕಾಂಗ್ರೆಸ್‍ನವರು ಯುವಕರು ಭಯೋತ್ಪಾದಕರ ರೀತಿ ಆಗುತ್ತಾರೆ ಅಂದಿದ್ದಾರೆ. ನಮ್ಮ ದೇಶದ ಯುವಕರು ಭಯೋತ್ಪಾದಕರಾಗುವುದಿಲ್ಲ. ಕಾಂಗ್ರೆಸ್‍ನವರು ಭಯೋತ್ಪಾದಕರನ್ನಾಗಿ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಗ್ನಿಪಥ್ ಯೋಜನೆ ಕೇವಲ ನಮ್ಮ ದೇಶದಲ್ಲಿ ಮಾತ್ರ ಇಲ್ಲ. ಪ್ರಪಂಚದ ಅನೇಕ ರಾಷ್ಟ್ರಗಳಲ್ಲಿ ಈ ಯೋಜನೆ ಇದೆ. ಅಗ್ನಿಪಥ್ ವಿಚಾರ ತಿರುಚಿ ನಿರುದ್ಯೋಗ ಯುವಕರನ್ನು ಕಾಂಗ್ರೆಸ್ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಇದರ ಹಿಂದೆ ಕಾಂಗ್ರೆಸ್ ನೇತೃತ್ವ ಇದ್ದರೆ ಅದನ್ನು ತಡೆಯುವ ಕೆಲಸ ಆಗಬೇಕು ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಕ್ರಿಕೆಟ್ ಆಡುವ ವೇಳೆ ನಗರಸಭೆ ಗುತ್ತಿಗೆ ನೌಕರನಿಗೆ ಹೃದಯಾಘಾತ

ಈ ಹಿಂದೆ ಸಹ ಹಲವು ಹೋರಾಟಗಳು, ಪ್ರತಿಭಟನೆಗಳು ನಡೆದಿವೆ. ಆದರೆ ಯಾರೂ ಈ ರೀತಿ ಬೆಂಕಿ ಹಚ್ಚಿ, ಆಸ್ತಿ ಪಾಸ್ತಿ ಹಾನಿ ಮಾಡುವ ಕೆಲಸ ಮಾಡಿರಲಿಲ್ಲ. ಶಾಂತಿಯುತವಾಗಿ ಹೋರಾಟ ಮಾಡಿ ಗೆಲುವು ಪಡೆದುಕೊಂಡಿದ್ದರು. ಪಕ್ಷ ಯಾವುದೇ ಇರಲಿ ಮೊದಲು ದೇಶ ನಮ್ಮದು ಎಂಬ ಭಾವನೆ ಇರಬೇಕು. ಈ ದೇಶದ ಆಸ್ತಿ ಪಾಸ್ತಿ ಹಾನಿಯಾದರೆ ಯಾರು ಹೊಣೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಆನ್‍ಲೈನ್‍ನಲ್ಲಿ ಬುಕ್ ಮಾಡಿದ್ದು ಆನಿಯನ್ ರಿಂಗ್ಸ್ ಬಂದಿದ್ದು ಹಸಿ ಈರುಳ್ಳಿ

Live Tv

Share This Article
Leave a Comment

Leave a Reply

Your email address will not be published. Required fields are marked *