ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪೂಂಚ್ (Poonch) ಜಿಲ್ಲೆಯ ನಿಯಂತ್ರಣ ರೇಖೆಯ ಬಳಿ ನೆಲಬಾಂಬ್ ಸ್ಫೋಟಗೊಂಡು ಓರ್ವ ಅಗ್ನಿವೀರ್ (Agniveer) ಸಾವನ್ನಪ್ಪಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದಾರೆ.
#GOC #WhiteKnightCorps and all ranks pay solemn tribute to Agniveer Lalit Kumar, who made the supreme sacrifice, while on an area domination patrol in general area of #Krishna Ghati brigade on 25 July 2025, following a mine blast.
We stand with the bereaved family in this hour of… pic.twitter.com/kA0VSNl5Qp— White Knight Corps (@Whiteknight_IA) July 25, 2025
ಕೃಷ್ಣ ಘಾಟಿಯ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದಾಗ, ಸ್ಫೋಟ ಸಂಭವಿಸಿದೆ. ಪರಿಣಾಮ ಅಗ್ನಿವೀರ್ ಲಲಿತ್ ಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಸೈನಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತು ಸ್ಥಿರವಾಗಿದ್ದಾರೆ ಎಂದು ಅವರು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಗ್ನಿವೀರ್ ರದ್ದು, ಒಪಿಎಸ್ ಜಾರಿ: ನಾಸಿರ್ ಹುಸೇನ್
ಕರ್ತವ್ಯದಲ್ಲಿದ್ದಾಗ ಪ್ರಾಣ ತ್ಯಾಗ ಮಾಡಿದ 7 ಜೆಎಟಿ ರೆಜಿಮೆಂಟ್ನ ಅಗ್ನಿವೀರ್ ಲಲಿತ್ ಕುಮಾರ್ ಅವರಿಗೆ ಜಿಒಸಿ ವೈಟ್ ನೈಟ್ ಕಾರ್ಪ್ಸ್ ಮತ್ತು ಎಲ್ಲಾ ಶ್ರೇಣಿಗಳು ಗೌರವ ಸಲ್ಲಿಸುತ್ತವೆ. ದುಃಖದ ಈ ಸಮಯದಲ್ಲಿ ನಾವು ಮೃತರ ಕುಟುಂಬದೊಂದಿಗೆ ನಿಲ್ಲುತ್ತೇವೆ ಎಂದು ವೈಟ್ ನೈಟ್ ಕಾರ್ಪ್ಸ್ ಎಕ್ಸ್ನಲ್ಲಿ ತಿಳಿಸಿದೆ. ಇದನ್ನೂ ಓದಿ: ಅಗ್ನಿವೀರರಿಗೆ ಪೊಲೀಸ್, ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗ ನೀಡಲು ಉತ್ತರಾಖಂಡ ಸರ್ಕಾರ ನಿರ್ಧಾರ: ಸಿಎಂ ಧಾಮಿ