ಅಹಮದಾಬಾದ್: ಏರ್ ಇಂಡಿಯಾ (Air India) ವಿಮಾನ ದುರಂತದಲ್ಲಿ ಮೃತಪಟ್ಟ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ (Vijay Rupani) ಅವರ ಅಂತ್ಯಕ್ರಿಯೆ ಇಂದು ಗುಜರಾತ್ನ ರಾಜ್ಕೋಟ್ನಲ್ಲಿ (Rajkot) ನಡೆಯಲಿದೆ.
ವಿಜಯ್ ರೂಪಾನಿ ರಾಜ್ಕೋಟ್ ಪ್ರತಿನಿಧಿಸುತ್ತಿದ್ದರು. ಭಾನುವಾರ ವಿಜಯ್ ರೂಪಾನಿ ಡಿಎನ್ಎ ಮ್ಯಾಚ್ ಆಗಿತ್ತು. ಅವರ ಸಹೋದರಿ ಡಿಎನ್ಎ ಜೊತೆಗೆ ವಿಜಯ್ ರೂಪಾನಿ ಡಿಎನ್ಎ ಮ್ಯಾಚ್ ಆಗಿತ್ತು. ಇಂದು ಬೆಳಗ್ಗೆ 11:30ಕ್ಕೆ ಸಿವಿಲ್ ಆಸ್ಪತ್ರೆಯಿಂದ ಮೃಹದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗುತ್ತದೆ. ಬಳಿಕ ಮೃತದೇಹವನ್ನು ವಿಮಾನದ ಮೂಲಕ ರಾಜ್ಕೋಟ್ಗೆ ಕೊಂಡೊಯ್ಯಲಾಗುವುದು. ಇದನ್ನೂ ಓದಿ: ಅವಳ ಮಾತು ಕೇಳಿದ್ದಕ್ಕೆ ಜೀವ ಉಳಿಯಿತು.. ಥ್ಯಾಂಕ್ಸ್ ಹೆಂಡ್ತಿ: ಪತನವಾದ ಫ್ಲೈಟ್ನಲ್ಲೇ ಹೋಗ್ಬೇಕಿದ್ದ ವೈದ್ಯ ಪಾರು
ಮಧ್ಯಾಹ್ನ 2 ಗಂಟೆಯ ವೇಳೆಗೆ ರಾಜ್ಕೋಟ್ ತಲುಪುವ ನಿರೀಕ್ಷೆಯಿದೆ. ಸಂಜೆ 5 ಗಂಟೆಗೆ ಅಂತಿಮ ಯಾತ್ರೆ ಆರಂಭವಾಗಲಿದ್ದು, 6 ಗಂಟೆಯ ವೇಳೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ವಿಜಯ್ ರೂಪಾನಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಗಾಳಿ-ಮಳೆಗೆ ಧರೆಗುರುಳಿದ ಮರ; ಮುಳ್ಳಯ್ಯನಗಿರಿ-ದತ್ತಪೀಠ ಮಾರ್ಗ ಬಂದ್