ತಮಿಳುನಾಡಿನಲ್ಲಿ ಬಿಜೆಪಿಗೆ ಬಿಗ್ ಶಾಕ್- NDA ಬಂಧ ಕಡಿದುಕೊಂಡ ಅಣ್ಣಾಡಿಎಂಕೆ  

By
1 Min Read
ಚೆನ್ನೈ: ಸಾರ್ವತ್ರಿಕ ಚುನಾವಣೆ ಸನಿಹದಲ್ಲಿ ತಮಿಳುನಾಡಿನಲ್ಲಿ ಬಿಜೆಪಿಗೆ (BJP) ಬಿಗ್ ಶಾಕ್ ತಗುಲಿದೆ. ಎನ್‍ಡಿಎ ಮೈತ್ರಿಕೂಟದಿಂದ ಅಣ್ಣಾಡಿಎಂಕೆ (AIADMK) ಹೊರಬಂದಿದೆ.
ಚೆನ್ನೈನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಡಿಎಂಕೆಯಿಂದ ಹೊರ ಬರಲು ಸರ್ವಾನುಮತದ ತೀರ್ಮಾನ ತೆಗೆದುಕೊಂಡಿದೆ. ಈ ಬೆನ್ನಲ್ಲೇ ಅಣ್ಣಾಡಿಎಂಕೆ ಕಾರ್ಯಕರ್ತರು ಸಂಭ್ರಮ ಮಾಡ್ಕೊಂಡಿದ್ದಾರೆ. ಆದರೆ ಅತ್ತ ಪ್ರಧಾನಿ ಮೋದಿ ಆಡಳಿತವನ್ನು ಮೆಚ್ಚಿರುವ ಒಡಿಶಾ ಸಿಎಂ ನವೀನ್ ಪಟ್ನಾಯಕ್ (Naveen Patnaik) 10ಕ್ಕೆ ಎಂಟು ಅಂಕ ನೀಡಿದ್ದಾರೆ. ಮಹಿಳಾ ಮೀಸಲಾತಿ ಮಸೂದೆಯನ್ನು ಮೆಚ್ಚಿದ್ದಾರೆ. ಒಂದು ದೇಶ-ಒಂದು ಚುನಾವಣೆಯ ಪರವಾಗಿಯೂ ನವೀನ್ ಪಟ್ನಾಯಕ್ ಬ್ಯಾಟ್ ಬೀಸಿದ್ದಾರೆ.
ಪಟ್ನಾಯಕ್ ಹೇಳಿಕೆಗಳನ್ನು ಗಮನಿಸಿದಲ್ಲಿ ಅವರು, ಎನ್‍ಡಿಎಗೆ ಹತ್ತಿರವಾಗ್ತಿದ್ದಾರೆ ಎಂಬ ವ್ಯಾಖ್ಯಾನಗಳು ಕೇಳಿಬಂದಿವೆ. ಈ ನಡುವೆ ಐಎನ್‍ಡಿಐಎ ಕೂಟದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಪದೇ ಪದೇ ಗೊತ್ತಾಗ್ತಿದೆ. ಪಶ್ಚಿಮಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮೇಲೆ ಲೋಕಸಭೆ ವಿಪಕ್ಷ ನಾಯಕ ಅಧಿರ್ ರಂಜನ್ ಚೌಧರಿ ವಾಗ್ದಾಳಿ ನಡೆಸಿದ್ದಾರೆ. ಮಮತಾ ಬ್ಯಾನರ್ಜಿಯ ಸ್ಪೇನ್ ಪ್ರವಾಸದ ಖರ್ಚುವೆಚ್ಚದ ಮಾಹಿತಿ ನೀಡುವಂತೆ ಸವಾಲ್ ಹಾಕಿದ್ದಾರೆ. ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿಗೆ ಸಹಪಾಠಿಗಳಿಂದ ಕಪಾಳಮೋಕ್ಷ – ಘಟನೆ ರಾಜ್ಯದ ಆತ್ಮಸಾಕ್ಷಿ ಅಲ್ಲಾಡಿಸುತ್ತದೆ: ಸುಪ್ರೀಂ
ದೋಸ್ತಿ ಖತಂಗೆ ಕಾರಣವೇನು?: ಜಯಲಲಿತಾ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಅಣ್ಣಾಮಲೈ ಮಾತನಾಡಿದ್ದರು. ಪಕ್ಷದ ಸಂಸ್ಥಾಪಕ ಅಣ್ಣಾದುರೈ ಬಗ್ಗೆ ಅಣ್ಣಾಮಲೈ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅಣ್ಣಾಮಲೈ ಬಗ್ಗೆ ದೂರು ಕೊಟ್ಟರೂ ಹೈಕಮಾಂಡ್ ಸ್ಪಂದಿಸಲಿಲ್ಲ ಎಂಬ ಕೋಪವೂ ಇದೆ.
ಪೆರಿಯಾರ್‍ವಾದದ ವಿರುದ್ಧ ಬಿಜೆಪಿಗರ ನಿರಂತರ ವಾಗ್ದಾಳಿ ನಡೆಸಿತ್ತು. ಬಿಜೆಪಿ ಜೊತೆ ಕೈಜೋಡಿಸಿದ್ದರಿಂದಲೇ ಕಳೆದ ಬಾರಿ ಸೋಲು ಎಂಬ ಅಭಿಪ್ರಾಯಕ್ಕೆ  ಅಣ್ಣಾಡಿಎಂಕೆ ಬಂದಿದ್ದು, ಸೀಟು ಹಂಚಿಕೆ ಸಂಬಂಧ ಬಿಜೆಪಿ ಜೊತೆ ಒಮ್ಮತದ ಸಹಮತ ಮೂಡದ ಪರಿಣಾಮ ಬಿಜೆಪಿಗೆ ಶಾಕ್ ನೀಡಿದೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್