ಕಲ್ಲಡ್ಕ ಪ್ರಭಾಕರ್ ಶಾಲೆಗೆ ಅನುದಾನ ಕಟ್- ತಟ್ಟೆ ಹಿಡಿದು ಸರ್ಕಾರದ ವಿರುದ್ಧ ಮಕ್ಕಳ ಧಿಕ್ಕಾರ

By
1 Min Read

ಮಂಗಳೂರು: ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ನೇತೃತ್ವದ ಎರಡು ಶಾಲೆಗಳಿಗೆ ಸರ್ಕಾರ ಅನುದಾನ ಕಡಿತಗೊಳಿಸಿದ ಹಿನ್ನೆಲೆಯಲ್ಲಿ ಎರಡೂ ವಿದ್ಯಾಕೇಂದ್ರಗಳ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ ನಡೆದಿದೆ.

ಶ್ರೀರಾಮ ವಿದ್ಯಾಕೇಂದ್ರ ಹಾಗೂ ಶ್ರೀದೇವಿ ವಿದ್ಯಾಕೇಂದ್ರಕ್ಕೆ ಸರ್ಕಾರ ಅನುದಾನ ಕಡಿತಗೊಳಿಸಿತ್ತು. ಹೀಗಾಗಿ ಬಿ.ಸಿ.ರೋಡ್ ನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಊಟದ ತಟ್ಟೆ ಹಿಡಿದು ಮಕ್ಕಳು ಪ್ರತಿಭಟನೆ ಮಾಡುತ್ತಿದ್ದು, ಅನ್ನ ಕಸಿದ ಸಿದ್ಧರಾಮಯ್ಯ ಎನ್ನುವ ಘೋಷಣೆ ಕೂಗುತ್ತಿದ್ದಾರೆ.

ಕಲ್ಲಡ್ಕ ಪ್ರಭಾಕರ್ ಭಟ್ ನಡೆಸುತ್ತಿದ್ದ ಶ್ರೀರಾಮ ವಿದ್ಯಾ ಹಾಗೂ ಶ್ರೀದೇವಿ ವಿದ್ಯಾ ಕೇಂದ್ರಕ್ಕೆ ಬರುತ್ತಿದ್ದ ಅನುದಾನವನ್ನು ಸರ್ಕಾರ ಕಡಿತಗೊಳಿಸಿದೆ. ಕಳೆದ ಹತ್ತು ವರ್ಷಗಳಿಂದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಿಂದ ಈ ಶಾಲೆಗಳಿಗೆ ಅನುದಾನ ನೀಡಲಾಗ್ತಿತ್ತು. ಈ ಎರಡು ಶಾಲೆಗಳನ್ನು ಕೊಲ್ಲೂರು ಮೂಕಾಂಬಿಕಾ ದೇವಾಲಯ ದತ್ತು ಪಡೆದುಕೊಂಡಿತ್ತು.

ಕಳೆದ ಹತ್ತು ವರ್ಷಗಳಲ್ಲಿ ಕೊಲ್ಲೂರು ದೇಗುಲದಿಂದ 2.83 ಕೋಟಿ ಅನುದಾನ ನೀಡಲಾಗಿತ್ತು. ಶ್ರೀರಾಮ ವಿದ್ಯಾಕೇಂದ್ರಕ್ಕೆ 2.32 ಕೋಟಿ ರೂ. ನೆರವು ಲಭಿಸಿತ್ತು. ಹಾಗೆ ಬಂಟ್ವಾಳದ ಪುಣಚ ಶ್ರೀದೇವಿ ವಿದ್ಯಾಕೇಂದ್ರಕ್ಕೆ 50.72 ಲಕ್ಷ ನೆರವು ಲಭಿಸಿತ್ತು. ಇದೀಗ ಕೊಲ್ಲೂರು ದೇಗುಲ ದತ್ತು ತೆಗೆದುಕೊಂಡಿದ್ದ ಆದೇಶ ಹಿಂದಕ್ಕೆ ಪಡೆಯಲಾಗಿದ್ದು, ದೇವಸ್ಥಾನದ ದುಡ್ಡು ಶಾಲೆಗೆ ನೀಡಬಾರದೆಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ:  ಸರ್ಕಾರದಿಂದ ಕಲ್ಲಡ್ಕ ಪ್ರಭಾಕರ್ ಭಟ್ ಶಾಲೆಗೆ ಬರುತ್ತಿದ್ದ ಅನುದಾನ ಕಟ್: ರಮಾನಾಥ ರೈ ಹೀಗಂದ್ರು!

Share This Article
Leave a Comment

Leave a Reply

Your email address will not be published. Required fields are marked *