ಗಗನಸಖಿಯ ಸಮಾಜಮುಖಿ ಕಾಯಕ – ಗಗನದಿಂದ ಬೀಜದುಂಡೆ ಬಿತ್ತನೆ

Public TV
2 Min Read

ಚಿಕ್ಕಬಳ್ಳಾಪುರ: ಇಂದು ವಿಶ್ವ ಪರಿಸರ ದಿನಾಚರಣೆ. ಪರಿಸರ ದಿನ ಅಂಗವಾಗಿ ಎಲ್ಲೆಲ್ಲೂ ಗಿಡಗಳನ್ನು ನೆಡುವುದರ ಮೂಲಕ ಆಚರಣೆ ಮಾಡಲಾಗುತ್ತಿದೆ. ಆದರೆ ಇಲ್ಲೊಬ್ಬರು ಗಗನಸಖಿ ಗಗನದಿಂದಲೇ ಬೀಜ ಬಿತ್ತನೆ ಮಾಡಿ ಗಮನಸೆಳೆದಿದ್ದಾರೆ.

ಸಿಲಿಕಾನ್ ಸಿಟಿಯ ಬೆಡಗಿ, ಮಾಜಿ ಗಗನ ಸಖಿ, ಗಗನದಿಂದಲೇ ಪ್ಯಾರಾಗ್ಲೈಡಿಂಗ್ ಮೂಲಕ ಪಂಚಗಿರಿಗಳ ಸಾಲಲ್ಲಿ ಬೀಜದುಂಡೆ ಬಿತ್ತನೆ ಮಾಡಿದ್ದಾರೆ. ಈ ಮೂಲಕ ವಿಶೇಷವಾಗಿ ಪರಿಸರ ದಿನಾಚರಣೆ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಹತ್ತಾರು ವರ್ಷಗಳ ಕಾಲ ಗಗನಸಖಿಯಾಗಿ ಕೆಲಸ ಮಾಡಿದ್ದ ಸಕ್ರಿಯಾ ಚಾರಿಟೇಬಲ್ ಟ್ರಸ್ಟ್‌ನ ಸಂಸ್ಥಾಪಕಿ ಅನಿತಾ ರಾವ್ ಭಾನುವಾರ ಚಿಕ್ಕಬಳ್ಳಾಪುರ ತಾಲೂಕಿನ ಪಂಚಗಿರಿಗಳಲ್ಲಿ ಪ್ಯಾರಾಮೋಟರಿಂಗ್ ಮೂಲಕ ಬೀಜದುಂಡನೆ ಬಿತ್ತನೆ ಮಾಡಿದರು. ಇದನ್ನೂ ಓದಿ: ಲಂಕಾಗೆ 3.3 ಟನ್‌ ಔಷಧ ಪೂರೈಕೆ – ಭಾರತ ಸರ್ಕಾರದಿಂದ ನೆರವು

ಹೌದು, ಗಗನಸಖಿಯಾಗಿ ಕೆಲಸ ಮಾಡಿ, ಸಾಂಸಾರಿಕ ಜೀವನಕ್ಕೆ ಕಾಲಿಡುವ ಸಂದರ್ಭ ಗಗನಸಖಿ ಕೆಲಸಕ್ಕೆ ಗುಡ್‌ಬೈ ಹೇಳಿದರು. ಬಳಿಕ ಅನಿತಾ ಸಕ್ರಿಯಾ ಚಾರಿಟೇಬಲ್ ಟ್ರಸ್ಟ್ ಮೂಲಕ ಸಮಾಜಮುಖಿ ಕೆಲಸದ ಕಡೆ ಮುಖ ಮಾಡಿದ್ದಾರೆ. ಇಂದು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಬ್ರಹ್ಮಗಿರಿ, ಸ್ಕಂದಗಿರಿ, ದಿಬ್ಬಗಿರಿ, ನಂದಿಗಿರಿಧಾಮಗಳಲ್ಲಿ ಸುಮಾರು 70,000 ಬೀಜದ ಉಂಡೆಗಳನ್ನು ಹಾಕುವ ಮೂಲಕ ಬರದ ನಾಡಿನ ಬೆಟ್ಟ ಗುಡ್ಡಗಳಲ್ಲಿ ಕಾಡು ಬೆಳೆಸುವ ಕಾಯಕಕ್ಕೆ ಮುಂದಾಗಿದ್ದಾರೆ.

ಈ ವೇಳೆ ಮಾತನಾಡಿದ ಅನಿತಾ ರಾವ್, ನಾವು ಪರಿಸರ ಬಳಸಿಕೊಳ್ಳುವುದರ ಜೊತೆಗೆ ಪರಿಸರಕ್ಕೆ ಕೊಡುಗೆಯನ್ನೂ ನೀಡಬೇಕು. ಅತಿ ಕಷ್ಟಕರ ಜಾಗಗಳಲ್ಲಿ ಅಂದರೆ, ಬೆಟ್ಟ ಗುಡ್ಡಗಳಲ್ಲಿ ಯಾರೂ ಹೋಗಿ ಗಿಡಗಳನ್ನು ನೆಡಲು ಸಾಧ್ಯವಿಲ್ಲ. ಹೀಗಾಗಿ ಪ್ಯಾರಾಮೋಟರ್, ಹೆಲಿಕಾಪ್ಟರ್, ಮೂಲಕ ಸೀಡ್ ಬಾಲ್‌ಗಳನ್ನು ಹಾಕಿ, ಗಿಡ ನೆಡಲು ಸಾಧ್ಯವಿದೆ. ಇಂದು ಪುಣೆಯಿಂದ ಪ್ಯಾರಾಮೋಟರ್ ತರಿಸಿ ಬಿತ್ತನೆ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಜೂಮ್ ಕ್ಲಾಸ್ ಮಿಸ್ ಮಾಡ್ದೆ ಹಾಜರಾಗಿದ್ದ ಬೆಕ್ಕು – ಹ್ಯಾಟ್ ಕೊಟ್ಟ ವಿಶ್ವವಿದ್ಯಾಲಯ

ಅರಣ್ಯ ಇಲಾಖೆ ಸಹಯೋಗದೊಂದಿಗೆ 7 ಬಗೆಯ ಸುಮಾರು 100 ಕೆಜಿ ಬೀಜಗಳನ್ನು ಇಂದು ಬಿತ್ತನೆ ಮಾಡಲಾಗಿದೆ. 10 ವರ್ಷ ಗಗನಸಖಿಯಾಗಿ ಕೆಲಸ ಮಾಡಿರುವ ನಾನು ಈಗ ಮನೆಯಲ್ಲೇ ಕುಳಿತು ಕಾಲ ಕಳೆಯುವ ಬದಲು ಇಂತಹ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡಿದ್ದೇನೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *