ವೇತನ ಹೆಚ್ಚಳ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಏರ್‍ಪೋರ್ಟ್ ನೌಕರರ ಪ್ರತಿಭಟನೆ

Public TV
1 Min Read

ಚಿಕ್ಕಬಳ್ಳಾಪುರ: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಏರ್ ಇಂಡಿಯಾ ಸ್ಯಾಟ್ಸ್ ಕಾರ್ಮಿಕರ ವೇತನ ಹೆಚ್ಚಳ ಮತ್ತು ಯೂನಿಯನ್ ಗೆ ಮಾನ್ಯತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನೂರಾರು ಕಾರ್ಮಿಕರು ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಗೇಟ್ ಬಳಿ ಜಮಾಯಿಸಿದ ನೂರಾರು ಕಾರ್ಮಿಕರು ಏರ್ ಇಂಡಿಯಾ ಸ್ಯಾಟ್ಸ್ ಆಡಳಿತ ಮಂಡಳಿ ವಿರುದ್ಧ ಧಿಕ್ಕಾರಗಳನ್ನ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏರ್‍ಪೋರ್ಟ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಕನಿಷ್ಟ ವೇತನ ಸೇರಿದಂತೆ ಸೂಕ್ತ ಸೌಲಭ್ಯಗಳನ್ನ ನೀಡುತ್ತಿಲ್ಲ. ಹೀಗಾಗಿ ಕಾರ್ಮಿಕರು ಬೇಡಿಕೆಗಳ ಈಡೇರಿಕೆಗೆ ಏರ್ ಇಂಡಿಯಾ ಸ್ಯಾಟ್ಸ್ ನ ಎಲ್ಲ ಕಾರ್ಮಿಕರು ಒಟ್ಟಾಗಿ ಯೂನಿಯನ್ ಸಂಘಟನೆ ಮಾಡಿಕೊಂಡಿದ್ರು. ಆದರೆ ಈ ಸಂಘಟನೆಗೆ ಆಡಳಿತ ಮಂಡಳಿ ಮಾನ್ಯತೆ ನೀಡುತ್ತಿಲ್ಲ ಅಂತ ಆಡಳಿತ ಮಂಡಳಿ ವಿರುದ್ಧ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೂರು ದಿನಗಳ ಕಾಲ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು ಮೂರು ದಿನಗಳಲ್ಲಿ ಆಡಳಿತ ಮಂಡಳಿ ಕಾರ್ಮಿಕರ ಬೇಡಿಕೆಗಳಿಗೆ ಸ್ವಂದಿಸದಿದಲ್ಲಿ ಕಾರ್ಮಿಕರೆಲ್ಲ ಒಗ್ಗಟ್ಟಾಗಿ ಉಗ್ರ ಹೋರಾಟ ನಡೆಸುತ್ತೇವೆ ಎಂದು ಯೂನಿಯನ್ ಸಂಘಟನಾ ಕಾರ್ಯದರ್ಶಿ ಸತೀಶ್ ಎಚ್ಚರಿಕೆ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *