ದಾವಣಗೆರೆ ಉಕ್ಕಡಗಾತ್ರಿಯಲ್ಲಿ ಅಜ್ಜಯ್ಯನ ಜಾತ್ರೆ – ಸಾವಿರಾರು ಭಕ್ತರು ಭಾಗಿ

Public TV
1 Min Read

ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕಿನ ಉಕ್ಕಡಗಾತ್ರಿ ಅಜ್ಜಯ್ಯನ ಸುಕ್ಷೇತ್ರದಲ್ಲಿ ವಿಶಿಷ್ಟ ಜಾತ್ರೆ ನಡೆಯುತ್ತಿದೆ. ಮಾನಸಿಕ ಕಾಯಿಲೆಯಿಂದ ಹಿಡಿದು ಎಲ್ಲಾ ರೋಗಗಳನ್ನು ವಾಸಿ ಮಾಡುವ ಶಕ್ತಿ ಈ ಕ್ಷೇತ್ರಕ್ಕಿದೆ ಎಂಬುದು ಇಲ್ಲಿನ ಜನರ ನಂಬಿಕೆಯಾಗಿದೆ.

ಪ್ರತಿ ಅಮಾವಾಸ್ಯೆಯಲ್ಲಿ ಈ ಕ್ಷೇತ್ರದಲ್ಲಿ ವಿಶಿಷ್ಟವಾದ ಪೂಜೆ ನಡೆಯುತ್ತವೆ. ಅದರಲ್ಲೂ ವರ್ಷದ ಶಿವರಾತ್ರಿ ಅಮಾವಾಸ್ಯೆ ನಂತರ ನಡೆಯುವ ಅಜ್ಜಯ್ಯನ ರಥೋತ್ಸವದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಲಕ್ಷಾಂತರ ಮಂದಿ ಭಕ್ತರು ನೆರೆದು ಜಾತ್ರೆಯನ್ನು ವಿಜೃಂಭಣೆಯಿಂದ ನೆರವೇರಿಸುತ್ತಾರೆ. ಬೆಳ್ಳಗ್ಗೆಯಿಂದಲೂ ಶ್ರೀ ಗುರು ಕರಿಬಸವೇಶ್ವರ ಸ್ವಾಮಿಗೆ ವಿಶೇಷವಾದ ಪೂಜೆ ಪುನಸ್ಕಾರ ನಡೆಯುತ್ತವೆ. ಮೊದಲಿಗೆ ಅಜ್ಜಯ್ಯನ ಗದ್ದುಗೆ ಪೂಜೆ ನಡೆಸಿ ನಂತರ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡುತ್ತಾರೆ.

 

ಅಜ್ಜಯ್ಯನ ಪವಾಡವನ್ನು ನಂಬಿ ಲಕ್ಷಾಂತರ ಮಂದಿ ಭಕ್ತ ಸಂಕುಲವೇ ಇಲ್ಲಿ ನೆರೆಯುತ್ತದೆ. ಶಿವರಾತ್ರಿ ಬಳಿಕ ಅಮವಾಸ್ಯೆಯಂದು ನಡೆಯುವ ಜಾತ್ರೆಯಲ್ಲಿ ಕ್ಷುದ್ರ ಶಕ್ತಿಗಳಿಂದ ತೊಂದರೆ ಅನುಭವಿಸುತ್ತಿರುವ ಭಕ್ತರನ್ನು ಪಾರು ಮಾಡುವ ಶಕ್ತಿ ಶ್ರೀ ಗುರು ಕರಿಬಸವೇಶ್ವರ ಸ್ವಾಮಿಗೆ ಇದೆ ಎನ್ನುವುದು ಇಲ್ಲಿನ ಭಕ್ತರ ನಂಬಿಕೆ.

ಹೀಗಾಗಿ ವಿವಿಧ ಜಿಲ್ಲೆಗಳಿಂದ ಲಕ್ಷಾಂತರ ಮಂದಿ ಭಕ್ತರು ಈ ಜಾತ್ರೆಯಲ್ಲಿ ಪಾಲ್ಗೊಂಡು ತಮ್ಮ ಕಷ್ಟಗಳನ್ನು ಅಜ್ಜಯ್ಯನ ಮುಂದಿಟ್ಟು ಬೇಡಿಕೊಳ್ಳುತ್ತಾರೆ. ಶ್ರೀ ಕ್ಷೇತ್ರಗಳಲ್ಲಿ ಒಂದಾದ ಉಕ್ಕಡಗಾತ್ರಿಯಲ್ಲಿ ರಥೋತ್ಸವ ಅದ್ದೂರಿಯಾಗಿ ನಡೆಯುತ್ತದೆ. ನಂಬಿದ ಭಕ್ತರಿಗೆ ಕ್ಷೇಮವನ್ನಾಚಿಸುವ ಶ್ರೀ ಕರಿಬಸವೇಶ್ವರನ ದರ್ಶನ ಪಡೆದು ಭಕ್ತಾದಿಗಳು ಪುನೀತರಾಗುತ್ತಾರೆ.

 

 

Share This Article
Leave a Comment

Leave a Reply

Your email address will not be published. Required fields are marked *