ಕರ್ಮಭೂಮಿಯಿಂದ ಪುಣ್ಯ ಭೂಮಿವರೆಗೂ ಅಮರ ಜ್ಯೋತಿ ಯಾತ್ರೆ: ಡಾ.ರಾಜ್ ಸಹೋದರಿ ನಾಗಮ್ಮರಿಂದ ಚಾಲನೆ

Public TV
1 Min Read

ಚಾಮರಾಜನಗರ: ಏಪ್ರಿಲ್ 24 ರಂದು ದಿವಂಗತ ಮೇರುನಟ ಡಾ.ರಾಜ್‍ಕುಮಾರ್ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಅವರ ಜನ್ಮಸ್ಥಳದಿಂದ ಸಮಾಧಿಯವರೆಗೆ ಅಮರ ಜ್ಯೋತಿ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಡಾ.ರಾಜ್ ಹಾಗೂ ಡಾ.ಪುನೀತ್ ರಾಜ್‍ಕುಮಾರ್ ಅವರ ಅಮರಜ್ಯೋತಿ ಯಾತ್ರೆಯನ್ನು ರಾಜ್ ಹುಟ್ಟೂರು ದೊಡ್ಡಗಾಜನೂರಿನಲ್ಲಿ ಇಂದು(ಗುರುವಾರ) ಚಾಲನೆ ನೀಡಲಾಯಿತು.

ಗಾಜನೂರಿನಲ್ಲಿರುವ ಡಾ.ರಾಜ್ ಸಹೋದರಿ ನಾಗಮ್ಮರಿಂದ ಜ್ಯೋತಿ ಬೆಳಗಿಸಿ ಹಸ್ತಾಂತರಿಸುವ ಮೂಲಕ ಕರ್ಮಭೂಮಿಯಿಂದ ಪುಣ್ಯಭೂಮಿವರೆಗಿನ ಅಮರಜ್ಯೋತಿ ಯಾತ್ರೆ ಮೆರವಣಿಗೆಗೆ ಚಾಲನೆ ನೀಡಿದರು. ದೊಡ್ಮನೆ ಕುಟುಂಬದ ಅಭಿಮಾನಿಗಳ ಬಳಗದಿಂದ ಹಮ್ಮಿಕೊಂಡಿರುವ ಈ ಯಾತ್ರೆ ಇಂದು ಗಾಜನೂರಿನಿಂದ ಹೊರಟು ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ ಮೂಲಕ ತೆರಳಿ ಏಪ್ರಿಲ್ 24 ರಂದು ಬೆಂಗಳೂರಿಗೆ ತೆರಳಿ ರಾಜ್ ಹಾಗೂ ಪುನೀತ್‍ ರಾಜ್‍ಕುಮಾರ್ ಸಮಾಧಿ ತಲುಪಲಿದೆ. ಇದನ್ನೂ ಓದಿ:  ಧ್ವಂಸಗೊಂಡ ಅಪ್ಪನ ಅಂಗಡಿಯಲ್ಲಿ ಕಾಯಿನ್ ಸಂಗ್ರಸುತ್ತಿದ್ದ ಬಾಲಕ – ಫೋಟೋ ವೈರಲ್ 

ಡಾ.ರಾಜ್ ಹಾಗೂ ಡಾ.ಪುನೀತ್ ರಾಜ್‍ಕುಮಾರ್ ಎಂದೆಂದಿಗೂ ಅಮರ ಎಂದು ಸಾರಲು ಹಾಗೂ ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಆಶಿಸಿ ಈ ಅಮರ ಜ್ಯೋತಿ ಯಾತ್ರೆ ನಡೆಸಲಾಗುತ್ತಿದೆ ಎಂದು ದೊಡ್ಮನೆ ಕುಟುಂಬದ ಅಭಿಮಾನಿಗಳ ಬಳಗದ ಅಧ್ಯಕ್ಷ ಮುನಿಯಪ್ಪ ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *