ದೊಡ್ಡರಸಿನಕೆರೆಯಲ್ಲಿ ಅಂಬರೀಶ್ 4ನೇ ವರ್ಷದ ಸ್ಮರಣೆ – ಸಮಾಧಿಗೆ ಪೂಜೆ ಸಲ್ಲಿಸಿದ ಸಂಸದೆ ಸುಮಲತಾ

Public TV
1 Min Read

ಮಂಡ್ಯ: ರೆಬಲ್ ಸ್ಟಾರ್ ಅಂಬರೀಶ್ (Ambareesh) ಅವರ 4ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ ಅಂಬರೀಶ್ ಹುಟ್ಟೂರಾದ ಮಂಡ್ಯ (Mandya) ಜಿಲ್ಲೆಯ ಮದ್ದೂರು (Maddur) ತಾಲೂಕಿನ ದೊಡ್ಡರಸಿನಕೆರೆ (Doddarasikere) ಗ್ರಾಮಕ್ಕೆ ಆಗಮಿಸಿದ ಸಂಸದೆ ಸುಮಲತಾ ಅಂಬರೀಶ್ ಅವರು ಅಂಬರೀಶ್ ಅವರ ಸಮಾಧಿಗೆ ಪೂಜೆ ಸಲ್ಲಿಸಿದರು.

ಪ್ರತಿ ವರ್ಷ ಈ ದಿನದಂದು ದೊಡ್ಡರಸಿನಕೆರೆ ಗ್ರಾಮಕ್ಕೆ ಬಂದು ಅಂಬರೀಶ್ ಸಮಾಧಿಗೆ ಸುಮಲತಾ ಅಂಬರೀಶ್ (Sumalatha Ambareesh) ಅವರು ಪೂಜೆ ಸಲ್ಲಿಸುತ್ತಾರೆ. ಅದರಂತೆ ಇಂದು ನಾಲ್ಕನೇ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆ ಇಂದು ಸಹ ಪೂಜೆ ಸಲ್ಲಿಸಿದರು. ಈ ವೇಳೆ ಸುಮಲತಾಗೆ ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ (Rockline Venkatesh), ನಟ ದೊಡ್ಡಣ್ಣ (Doddanna) ಅವರು ಸಹ ಸಾಥ್ ನೀಡಿದರು. ಇದೇ ವೇಳೆ ದೊಡ್ಡರಸಿನಕೆರೆ ಗ್ರಾಮಸ್ಥರು ಗೀರೈಸ್ ಹಾಗೂ ಚಿಕನ್ ಗ್ರೇವಿಯನ್ನು ಜನರಿಗೆ ವಿತರಣೆ ಮಾಡಿದರು. ಇದನ್ನೂ ಓದಿ: ಅಭಿಷೇಕ್ ಮದುವೆ ಸುಳ್ಳು ಸುಳ್ಳು: ಸುಮಲತಾ ಅಂಬರೀಶ್ ಸ್ಪಷ್ಟನೆ

ಇದೇ ವೇಳೆ ಮಾತನಾಡಿದ ಸುಮಲತಾ ಅವರು, ಅಜಾತಶತ್ರು ಎನ್ನುವ ಪದಕ್ಕೆ ಸರಿಯಾದ ಅರ್ಥ ಅಂಬರೀಶ್. ಅಂಬರೀಶ್ ಅವರನ್ನು ಮಿಸ್ ಮಾಡಿಕೊಳ್ಳದವರು ಯಾರು ಸಹ ಇಲ್ಲ. ಅವರು ನಮ್ಮನ್ನಗಲಿ 4 ವರ್ಷ ಕಳೆದಿದೆ, ಆದರೂ ಅಭಿಮಾನಿಗಳಿಗೆ ಅಂಬಿ ಮೇಲಿನ ಪ್ರೀತಿ ಕಿಂಚಿತ್ತೂ ಕಡಿಮೆಯಾಗಿಲ್ಲ. ಅಂಬಿ ನೆನಪಲ್ಲಿ ಅಭಿಮಾನಿಗಳು ಹಲವಾರು ಜನಪರ ಕೆಲಸ ಮಾಡುತ್ತಿದ್ದಾರೆ. ಅಂಬರೀಶ್ ಎಲ್ಲರನ್ನೂ ಆತ್ಮೀಯತೆಯಿಂದ ಕಾಣುತ್ತಿದ್ದರು. ಹಾಗಾಗಿ ಅವರನ್ನು ಮಿಸ್ ಮಾಡಿಕೊಳ್ಳದವರೇ ಇಲ್ಲ ಎಂದರು. ಇದನ್ನೂ ಓದಿ: ಉಪೇಂದ್ರ ಆರೋಗ್ಯದಲ್ಲಿ ಏರುಪೇರು: ಹರ್ಷ ಆಸ್ಪತ್ರೆಗೆ ದಾಖಲು, ಡಿಸ್ಚಾರ್ಜ್

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *