ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಮತಚಲಾಯಿಸಿದ ಅಂಬಿ!

Public TV
1 Min Read

ಮಂಡ್ಯ: ಮಾಜಿ ಸಚಿವ, ರೆಬಲ್ ಸ್ಟಾರ್ ಅಂಬರೀಶ್ ಅವರು ಮೊಬೈಲ್ ಟಾರ್ಚ್ ಲೈಟ್ ಸಹಾಯದಿಂದ ಮತದಾನ ಮಾಡಿದ್ದಾರೆ.

ಮದ್ದೂರು ತಾಲೂಕಿನ ದೊಡ್ಡರಸಿನಕೆರೆಯಲ್ಲಿ ಮತದಾನ ಮಾಡಲು ಅಂಬರೀಶ್ ಹಾಗೂ ಡಿ.ಸಿ.ತಮ್ಮಣ್ಣ ಸ್ವಗ್ರಾಮಕ್ಕೆ ಭೇಟಿ ನೀಡಿ ಮತದಾನವನ್ನು ಮಾಡಿದರು. ಈ ವೇಳೆ ವಿವಿ ಪ್ಯಾಟ್ ಬಳಿ ನಿಂತು ಏನೋ ಇಲ್ಲಿ ಕತ್ತಲೆ ಎಂದು ಬೆಂಬಲಿಗರಿಗೆ ಹೇಳಿದರು. ಬಳಿಕ ಬೆಂಬಲಿಗರು ಮೊಬೈಲ್ ಟಾರ್ಚ್ ವ್ಯವಸ್ಥೆ ಮಾಡಿದರು. ಮೊಬೈಲ್ ಟಾರ್ಚ್ ಬೆಳಕಿನ ಸಹಾಯದಿಂದ ಅಂಬರೀಶ್ ವೋಟ್ ಮಾಡಿದರು.

ಮತಚಲಾಯಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅಂಬಿ ಉಪಚುನಾವಣೆಯ ಫಲಿತಾಂಶ ಕುರಿತು ಈ ಚುನಾವಣೆ ಸರಿಯಿಲ್ಲ. ಮೂರು ಮೂರು ದಿನಕ್ಕೆ ಚುನಾವಣೆ 13 ದಿನಕ್ಕೆ ಕಳೆದುಹೋಗುತ್ತದೆ. ಮತ್ತೆ ಓಡಾಡಬೇಕು. 5 ಕ್ಷೇತ್ರದಲ್ಲಿ ಐದು ಕ್ಷೇತ್ರ ಗೆಲ್ಲುತ್ತೇವೆ ಎಂದರು. ಈ ವೇಳೆ ರಾಮನಗರದಲ್ಲಾದ ಬೆಳವಣಿಗೆಗಳಿಗೆ ಅದು ಸರಿಯಾದುದ್ದಲ್ಲ. ಆದರೆ ಒಳಗಡೆ ಏನೇನೂ ಮಾತುಕತೆಗಳು ನಡೆದಿದೆಯೋ ಯಾರಿಗೂ ಗೊತ್ತಿಲ್ಲ. ಮನಸ್ತಾಪ ಇರಬಹುದು ಅಥವಾ ಬೇರೆ ರೀತಿಯ ವ್ಯವಹಾರ ಇರಬಹುದು ಅಷ್ಟೇ ಎಂದರು.

ಈ ಬಾರಿ ಮಂಡ್ಯದಲ್ಲಿ ಜೆಡಿಎಸ್ ಕಾಂಗ್ರೆಸ್ ಆಳ್ವಿಕೆ ಮಾಡಲಿದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ರಾಜ್ಯದಲ್ಲೇ ಜೆಡಿಎಸ್, ಕಾಂಗ್ರೆಸ್ ಆಳ್ವಿಕೆಯಲ್ಲಿದೆ ಇನ್ನೂ ಮಂಡ್ಯದಲ್ಲಿ ಆಗೋದಿಲ್ಲವೇ ಈ ಬಾರಿ ದಾಖಲೆಯ ಅಂತರದಲ್ಲಿ ಶಿವರಾಮೇಗೌಡರು ಗೆಲ್ಲಲೇಬೇಕು ಎಂದು ತಿಳಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *