ಟೋಲ್‍ಗೇಟ್‍ನಲ್ಲಿ ಅಂಬುಲೆನ್ಸ್ ಅಪಘಾತ ಪ್ರಕರಣ- ಸಾವಿನ ಸಂಖ್ಯೆ 4ಕ್ಕೆ ಏರಿಕೆ

Public TV
1 Min Read

ಉಡುಪಿ: ಟೋಲ್‍ಗೇಟ್ ನಲ್ಲಿ ಅಂಬುಲೆನ್ಸ್ ಅಪಘಾತಕ್ಕೀಡಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.

ಘಟನೆ ಸಂಬಂಧ ಈಗಾಗಲೇ ಹೊನ್ನಾವರದ ಲೋಕೇಶ್, ಮಾಧವ ನಾಯ್ಕ ಹಾಗೂ ಜ್ಯೋತಿ ಲೋಕೇಶ್ ನಾಯ್ಕ್ ಈ ಮೂವರು ಮೃತಪಟ್ಟಿದ್ದಾರೆ. ಹೊನ್ನಾವರ ಮೂಲದ ಮಂಜುನಾಥ ಮಾದೇವ ನಾಯ್ಕ ಅವರು ಆಸ್ಪತ್ರೆ ಸಾಗಿಸುವಷ್ಟರಲ್ಲೇ ಸಾವನ್ನಪ್ಪಿದ್ದಾರೆ.

ಗಜಾನನ ಲಕ್ಷ್ಮಣ್ ನಾಯ್ಕ್ ಎಂಬವರಿಗೆ ರಕ್ತದೊತ್ತಡ ಹೆಚ್ಚಾಗಿದ್ದವರಿಂದ ಅವರನ್ನು ಚಿಕಿತ್ಸೆಗೆಂದು ಕುಂದಾಪುರ ಆಸ್ಪತ್ರೆಗೆ ದಾಖಲಿಸಲು ತೆರಳುತ್ತಿದ್ದಾಗ ಈ ದುರಂತ ನಡೆದಿದೆ. ಘಟನೆಯಲ್ಲಿ ಟೋಲ್ ಸಿಬ್ಬಂದಿ ಶಂಬಾಜಿ ಸ್ಥಿತಿ ಗಂಭೀರವಾಗಿದ್ದು, ಅಂಬುಲೆನ್ಸ್ ಚಾಲಕ ರೋಶನ್ ಅವರಿಗೂ ಗಾಯಗಳಾಗಿದೆ. ಇದನ್ನೂ ಓದಿ: ಟೋಲ್‍ಗೇಟ್‍ಗೆ ಡಿಕ್ಕಿಯಾಗಿ ಪಲ್ಟಿಯಾದ ಅಂಬುಲೆನ್ಸ್- ಮೂವರು ಸಾವು, ಓರ್ವ ಗಂಭೀರ

ಏನಿದು ಘಟನೆ..?
ಹೊನ್ನಾವರದಿಂದ ಕುಂದಾಪುರಕ್ಕೆ ಬರುತ್ತಿದ್ದ ಅಂಬುಲೆನ್ಸ್, ಚಾಲಕನ ಅತೀವೇಗ ಮತ್ತು ಅಜಾಗರೂಕತೆಯಿಂದ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್‍ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಅಂಬುಲೆನ್ಸ್ ಡಿಕ್ಕಿ ಹೊಡೆದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಈ ಭಯಾನಕ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *