ಹಾಸನ: ಅಪಘಾತವಾಗಿ (Accident) ಒಂದು ಗಂಟೆ ಕಳೆದರೂ ಸರಿಯಾದ ಸಮಯಕ್ಕೆ ಅಂಬುಲೆನ್ಸ್ (Ambulance) ಬರದೇ ಯುವಕನೊಬ್ಬ ನಡು ರಸ್ತೆಯಲ್ಲೇ ನರಳಾಡಿ ಪ್ರಾಣ ಬಿಟ್ಟಿರುವ ದಾರುಣ ಘಟನೆ ಹಾಸನದಲ್ಲಿ (Hassana) ನಡೆದಿದೆ.
ಹಾಸನ ತಾಲೂಕಿನ ಕಲ್ಕೆರೆ ಗ್ರಾಮದ ಬಳಿ ಗುರುವಾರ ತಡರಾತ್ರಿ ಘಟನೆ ನಡೆದಿದೆ. ಆನಂದ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮೃತಪಟ್ಟ ಯುವಕ. ಬೇಲೂರು ಕಡೆಯಿಂದ ಹಾಸನದ ಕಡೆಗೆ ತನ್ನ ಬೈಕ್ನಲ್ಲಿ ಹೋಗುತ್ತಿದ್ದಾಗ ಅಪರಿಚಿತ ವಾಹನವೊಂದು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ಆನಂದ್ ತೀವ್ರವಾಗಿ ಗಾಯಗೊಂಡು ರಸ್ತೆ ನಡುವೆ ರಕ್ತದ ಮಡುವಿನಲ್ಲಿ ಬಿದ್ದಿದ್ದ. ಇದನ್ನೂ ಓದಿ: ಆನೆ ದಾಳಿಗೆ ಇಬ್ಬರು ಸಾವು – ಆತಂಕದಲ್ಲಿ ಗಡಿ ಜಿಲ್ಲೆಯ ಜನ
ಬಳಿಕ ಸ್ಥಳೀಯರು ಹಾಗೂ ಅದೇ ದಾರಿಯಲ್ಲಿ ಪ್ರಯಾಣಿಸುತ್ತಿದ್ದವರು ಅಂಬುಲೆನ್ಸ್ಗೆ ಕರೆ ಮಾಡಿದ್ದಾರೆ. ಆದರೆ ಅಪಘಾತ ಸಂಭವಿಸಿ ಒಂದು ಗಂಟೆ ಕಳೆದರೂ ಅಂಬುಲೆನ್ಸ್ ಬರದೇ ಹೋಗಿದ್ದು, ಅಷ್ಟರಲ್ಲಾಗಲೇ ಯುವಕ ನರಳಾಗಿ ಪ್ರಾಣ ಬಿಟ್ಟಿದ್ದಾನೆ.
ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದ್ದು, ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಹುಟ್ಟಿದ ಕೆಲ ಗಂಟೆಗಳಲ್ಲೇ ಶಿಶುವನ್ನು ಕತ್ತು ಹಿಸುಕಿ ಕೊಂದ ಪಾಪಿಗಳು!