ಗುರುವಾರ ಸಿಂಧನೂರು, ಬಳ್ಳಾರಿಗೆ ಅಮಿತ್ ಶಾ ಭೇಟಿ

Public TV
1 Min Read

ರಾಯಚೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಗುರುವಾರ ರಾಯಚೂರಿನ ಸಿಂಧನೂರು ಹಾಗೂ ಬಳ್ಳಾರಿಯ ಹೊಸಪೇಟೆಗೆ ಭೇಟಿ ನೀಡಲಿದ್ದು, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳ ಶಕ್ತಿಕೇಂದ್ರಗಳಲ್ಲಿ ಪ್ರಮುಖರ ಸಮಾವೇಶ ನಡೆಸಲಿದ್ದಾರೆ.

ನಿಗದಿತ ಕಾರ್ಯಕ್ರಮ ಸಂಜೆ 4 ಗಂಟೆಗೆ ಅಮಿತ್ ಶಾ ಸಿಂಧನೂರಿಗೆ ಆಗಮಿಸಲಿದ್ದು ಸಿಂಧನೂರಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ 10 ಸಾವಿರ ಕಾರ್ಯಕರ್ತರಿಗೆ ಮಾತ್ರ ಪ್ರವೇಶ ನಿಗದಿ ಮಾಡಲಾಗಿದೆ. ಈ ವೇಳೆ ಮೂರು ಜಿಲ್ಲೆಗಳ ಲೋಕಸಭಾ ಚುನಾವಣಾ ತಯಾರಿ ಹಾಗೂ ಕೇಂದ್ರ ಸರ್ಕಾರದ ಸಾಧನೆಗಳ ಬಗ್ಗೆ ಅಮಿತ್ ಶಾ ಮಾತನಾಡಲಿದ್ದಾರೆ.

ಸಂಜೆ 6 ಗಂಟೆಗೆ ಬಳ್ಳಾರಿಯ ಹೊಸಪೇಟೆಯಲ್ಲಿ ಆಯೋಜಿಸಿರುವ ಇಂಟಲೆಕ್ಚುವಲ್ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಬಳ್ಳಾರಿ, ರಾಯಚೂರು, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮುಖಂಡರ ತಂಡ ಮತ್ತು ಕಾರ್ಯಕ್ರಮ ಉಸ್ತುವಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಸಿಂಧನೂರು ಹಾಗೂ ಹೊಸಪೇಟೆಯ ಕಾರ್ಯಕ್ರಮಗಳಲ್ಲಿ ಬಿ.ಎಸ್.ಯಡಿಯೂರಪ್ಪ ಸೇರಿ ಬಿಜೆಪಿ ಪ್ರಮುಖ ಮುಖಂಡರು ಭಾಗವಹಿಸಲಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *