ಅಮಿತ್ ಶಾ ಮಂಗಳೂರು ಭೇಟಿ ರದ್ದಾಗಿದ್ದು ಯಾಕೆ?

Public TV
1 Min Read

ಮಂಗಳೂರು: ಗುರುವಾರ ಮಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆಯಬೇಕಿದ್ದ ಕೋರ್ ಕಮಿಟಿ ಸಭೆ ರದ್ದಾಗಿದೆ.

ಪ್ರಸ್ತುತ ಕೇರಳ ಭೇಟಿಯಲ್ಲಿರುವ ಅಮಿತ್ ಶಾ ಹೆಚ್ಚು ಸಭೆಗಳಲ್ಲಿ ಬ್ಯುಸಿ ಇದುರುವುದರಿಂದ ಮಂಗಳೂರು ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಮಂಗಳೂರಿಗೆ ಭೇಟಿ ರದ್ದಾಗಿರುವುದರಿಂಧ ಪಕ್ಷದ ಕೋರ್ ಕಮಿಟಿ ಸಭೆ ಮತ್ತು ಮಾಧ್ಯಮ ಉಸ್ತುವಾರಿ ಸಭೆಗಳು ಬೆಂಗಳೂರಿಗೆ ಶಿಫ್ಟ್ ಆಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ರಾಜ್ಯಾಧ್ಯಕ್ಷ ಬಿಎಸ್‍ವೈ ನಾಳೆ ಮಂಗಳೂರಿನಲ್ಲಿ ನಡೆಯಬೇಕಿದ್ದ ಬಿಜೆಪಿ ಅಮಿತ್ ಶಾ ಅವರೊಂದಿಗೆ ಎಲ್ಲಾ ಸಭೆಗಳು ರದ್ದಾಗಿವೆ. ಪಕ್ಷದ ಪ್ರಣಾಳಿಕೆ ಸಮಿತಿ ಸಭೆ, ಚುನಾವಣೆ ಪ್ರಚಾರ ಸಮಿತಿ, ಕೋರ್ ಕಮಿಟಿ ಸಭೆಗಳು ಮಂಗಳೂರಿಗೆ ಬದಲಾಗಿ ಬೆಂಗಳೂರಿನಲ್ಲೇ ನಡೆಯಲಿವೆ ಎಂದು ತಿಳಿಸಿದರು.

ನಾನು ಬೆಂಗಳೂರಿಗೆ ಬಂದು ಹೋದ ಬಳಿಕ ಪಕ್ಷ ಸಂಘಟನೆ ಸಂಪೂರ್ಣ ವರದಿಯನ್ನು ನೀಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಸೂಚಿಸಿದ್ದಾರೆ. ಈ ವೇಳೆ ಎರಡು ತಿಂಗಳ ಪಕ್ಷ ಸಂಘಟನೆ ವರದಿ ಕೊಡಿ, ವಿಸ್ತಾರಕರು ಏನು ಕೆಲಸ ಮಾಡಿದ್ದಾರೆ ಎನ್ನುವ ಮಾಹಿತಿಯನ್ನು ನೀಡಿ ಎಂದು ಸೂಚಿಸಿದ್ದಾರೆ. ನಾನು ಮೂರು ದಿನಗಳ ಭೇಟಿ ವೇಳೆ ಕೊಟ್ಟಿದ್ದ ಸಲಹೆ ಮತ್ತು ನಿರ್ದೇಶನಗಳು ಎಷ್ಟು ಅನುಷ್ಠಾನ ಆಗಿದೆ ಇದರ ಬಗ್ಗೆ ವಿವರ ನೀಡುವಂತೆ ಅಮಿತ್ ಶಾ ತಾಕೀತು ಮಾಡಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.

Share This Article
Leave a Comment

Leave a Reply

Your email address will not be published. Required fields are marked *