ಆಪರೇಷನ್ ಕಮಲ ಫೇಲ್ ಆಗಿ ಅಮಿತ್ ಶಾಗೆ ಎಚ್1ಎನ್1 ಬಂದಿದೆ: ಬಿ.ಕೆ ಹರಿಪ್ರಸಾದ್ ಟೀಕೆ

Public TV
1 Min Read

ಬೆಂಗಳೂರು: ಆಪರೇಷನ್ ಕಮಲ ಸಂಪೂರ್ಣವಾಗಿ ವಿಫಲವಾಗಿದಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಎಚ್1ಎನ್1 ಬಂದಿದೆ ಎಂದು ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.

ಬಿಜೆಪಿಯ ಆಪರೇಷನ್ ಕಮಲ ಖಂಡಿಸಿ ಇಂದು ಮೌರ್ಯ ಸರ್ಕಲ್‍ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದರು. ಈ ವೇಳೆ ವೇದಿಕೆ ಮೇಲೆ ಭಾಷಣ ಮಾಡುವಾಗ ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ವಿರುದ್ಧ ಬಿ.ಕೆ ಹರಿಪ್ರಸಾದ್ ಕಿಡಿಕಾರಿದರು.

ಬಿಜೆಪಿ ಪಕ್ಷ ಮೊದಲಿನಿಂದಲೂ ಕಾಂಗ್ರೆಸ್ ವಿರುದ್ಧ ಕೆಲಸ ಮಾಡುತ್ತಲೇ ಬಂದಿದೆ. ರಫೆಲ್ ಡೀಲ್‍ನಲ್ಲಿ ಬಿಜೆಪಿಗೆ 30 ಸಾವಿರ ಕೋಟಿ ಹಣ ಸಿಕ್ಕಿದೆ. ಇದೇ ಹಣದ ಅಹಂಕಾರದಲ್ಲಿ ಬಿಜೆಪಿ ಮೈತ್ರಿ ಸರ್ಕಾರ ಬೀಳಿಸಲು ಹೊರಟಿತ್ತು ಎಂದು ವಾಗ್ದಾಳಿ ನಡೆಸಿದರು.

ಈ ರೀತಿ ಹಗರಣ ಮಾಡಿ 1 ಲಕ್ಷ ಕೋಟಿ ಹಣ ಬಂದರೂ ನಮ್ಮ ಸರ್ಕಾರವನ್ನು ಬೀಳಿಸಲು ಸಾಧ್ಯವಿಲ್ಲ. ನಮ್ಮ ಶಾಸಕರನ್ನು ಅಮಿತ್ ಶಾ ಕಿಡ್ನಾಪ್ ಮಾಡಿದ್ದಾರೆ. ಕಾಣೆಯಾದ ಶಾಸಕರ ಕುಟುಂಬಸ್ಥರು ಹೇಬಿಯಸ್ ಕಾರ್ಪಸ್ ಅರ್ಜಿ ಹಾಕಬೇಕು. ಕರ್ನಾಟಕ ಸರ್ಕಾರವನ್ನ ಬೀಳಿಸಲು ಹೋಗಿ ಅಮಿತ್ ಶಾಗೆ ಈಗ ಜ್ವರ ಬಂದಿದೆ. ಈಗ ಬಂದಿರುವ ಜ್ವರ ಸಾಮಾನ್ಯ ಜ್ವರ ಅಲ್ಲ ಹಂದಿ ಜ್ವರ. ಮೃತ್ರಿ ಸರ್ಕಾರದ ವಿಚಾರಕ್ಕೆ ಬಂದು ಎಚ್1ಎನ್1 ಜೊತೆಗೆ ವಾಂತಿ ಬೇಧಿ ಕೂಡ ಶುರುವಾಗುತ್ತದೆ ಎಂದು ಟಾಂಗ್ ನೀಡಿದರು.

ಈ ಪ್ರತಿಭಟನೆಯಲ್ಲಿ ಆಪರೇಷನ್ ಕಮಲದ ಅಣಕು ಪ್ರದರ್ಶನ ಮಾಡಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪಕ್ಷದ ನಾಯಕರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *