ಅಮೂಲ್ಯಳನ್ನು ಕಾರ್ಯಕ್ರಮದಿಂದ ಕೈಬಿಟ್ಟ ಆಯೋಜಕರು- ವಿಮಾನ ಟಿಕೆಟ್ ರದ್ದು

Public TV
1 Min Read

ಮಂಗಳೂರು: ನಗರದಲ್ಲಿ ಸಿಎಎ ಹಾಗೂ ಎನ್‌ಆರ್‌ಸಿ ವಿರೋಧಿಸಿ ಫೆಬ್ರವರಿ 25ರಂದು ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಪ್ರಮುಖ ಭಾಷಣಕಾರಳಾಗಿ ಭಾಗವಹಿಸಬೇಕಿದ್ದ ಅಮೂಲ್ಯ ಲಿಯೋನ ಹೆಸರನ್ನು ಕೈಬಿಡಲಾಗಿದೆ. ಅಮೂಲ್ಯಳಿಗೆ ಕಾಯ್ದಿರಿಸಿದ್ದ ವಿಮಾನ ಟಿಕೆಟ್ ಕೂಡ ರದ್ದು ಪಡಿಸಲಾಗಿದೆ ಎಂದು ಪ್ರತಿಭಟನೆಯ ಉಸ್ತುವಾರಿ ವಹಿಸಿಕೊಂಡ ಮಾಜಿ ಮೇಯರ್ ಅಶ್ರಫ್ ಅವರು ತಿಳಿಸಿದ್ದಾರೆ.

ಮುಸ್ಲಿಂ ಐಕ್ಯತಾ ವೇದಿಕೆಯ ನೇತೃತ್ವದಲ್ಲಿ ಮಂಗಳೂರಿನ ಕುದ್ರೋಳಿ ಟಿಪ್ಪು ಸುಲ್ತಾನ್ ಗಾರ್ಡನ್‍ನಲ್ಲಿ ಈ ಪ್ರತಿಭಟನೆ ನಡೆಯಲಿದೆ. ಪ್ರತಿಭಟನಾ ಸಭೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ ಪರಪ್ಪನ ಅಗ್ರಹಾರ ಸೇರಿದ ಅಮೂಲ್ಯ ಪ್ರಮುಖ ಭಾಷಣ ಮಾಡಬೇಕಿತ್ತು. ಅದಕ್ಕಾಗಿ ಆಕೆಗೆ ಬೆಂಗಳೂರಿನಿಂದ ಮಂಗಳೂರಿಗೆ ಬರಲು ವಿಮಾನದ ಟಿಕೆಟ್ ಕೂಡ ಬುಕ್ ಮಾಡಿದ್ದೆವು ಎಂದು ಅಶ್ರಫ್ ಹೇಳಿದರು.

ಅಮೂಲ್ಯ ಬೆಂಗಳೂರಿನಲ್ಲಿ ನಡೆದ ಸಿಎಎ ವಿರೋಧಿ ಸಮಾವೇಶದಲ್ಲಿ ಪಾಕ್ ಪರ ಘೋಷಣೆ ಕೂಗಿ ದೇಶ ದ್ರೋಹ ಎಸಗಿದ್ದಾಳೆ. ಈ ಹಿನ್ನೆಲೆಯಲ್ಲಿ ಅಮೂಲ್ಯ ಹೆಸರು ನಮೂದಿಸಿದ ಮುದ್ರಿಸಿದ್ದ ಪ್ರತಿಭಟನೆಯ ಆಮಂತ್ರಣ ಪತ್ರಿಕೆಯನ್ನು ಹಂಚದೆ, ಆಕೆಯ ಹೆಸರು ಇಲ್ಲದ ಹೊಸ ಆಮಂತ್ರಣ ಪತ್ರಿಕೆ ಮುದ್ರಿಸಲಾಗಿದೆ. ಜೊತೆಗೆ ವಿಮಾನ ಟಿಕೆಟ್ ಕೂಡ ರದ್ದು ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *