ನನಗೆ ಅಸಮಾಧಾನ ಇಲ್ಲ, ಬೇಕಾದರೆ ಮಂಪರು ಪರೀಕ್ಷೆ ಮಾಡಿಸಿ: ಆನಂದ್ ಸಿಂಗ್

Public TV
1 Min Read

ಕೊಪ್ಪಳ: ಜಿಲ್ಲೆಯ ಉಸ್ತುವಾರಿ ಸಿಕ್ಕ ನಂತರ ಮೊದಲ ಬಾರಿ ಜಿಲ್ಲಾ ಕೇಂದ್ರಕ್ಕೆ ಬಂದು ಗವಿಮಠದ ದರ್ಶನ ಪಡೆದಿದ್ದೇನೆ. ಉಸ್ತುವಾರಿ ಬದಲಾವಣೆ ಮಾಡಿದ್ದಕ್ಕೆ ಯಾವ ಅಸಮಾಧಾನವೂ ಇಲ್ಲ. ಬೇಕಾದರೆ ಮಂಪರು ಪರೀಕ್ಷೆ ಮಾಡಿಸಿ, ಆಗಲೂ ಇದೇ ಉತ್ತರ ಬರುತ್ತದೆ ಎಂದು ಪ್ರವಾಸೋದ್ಯಮ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.

ಕೊಪ್ಪಳದ ಗವಿಮಠದ ಕರ್ತೃ ಗದ್ದುಗೆಗೆ ಇಂದು ಭೇಟಿ ನೀಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಪ್ಪಳ ಜಿಲ್ಲೆಯ ಉಸ್ತುವಾರಿ ಕೊಟ್ಟಿದ್ದಕ್ಕೆ ಯಾವ ಅಸಮಾಧಾನವೂ ಇಲ್ಲ ಎಂದು ಸಾಕಷ್ಟು ಬಾರಿ ಹೇಳಿದ್ದೇನೆ. ಬೇಕಾದರೆ ಮಂಪರು ಪರೀಕ್ಷೆ ಸೇರಿ ಎಲ್ಲಾ ಟೆಸ್ಟ್ ಮಾಡಿಸಿ, ಆಗಲೂ ಇದನ್ನೇ ಹೇಳುತ್ತೇನೆ ಎಂದರು. ಇದನ್ನೂ ಓದಿ: ಜೈ ಹಿಂದ್ – ಗಣರಾಜ್ಯೋತ್ಸವಕ್ಕೆ ಶುಭಕೋರಿದ ಪ್ರಧಾನಿ ಮೋದಿ

ಬಿಜೆಪಿಯಿಂದ ಯಾರೂ ಕಾಂಗ್ರೆಸ್‍ಗೆ ಹೋಗಲ್ಲ, ಬಂದರೆ ಕಾಂಗ್ರೆಸ್‍ನವರೇ ಬಿಜೆಪಿಗೆ ಬರಬಹುದು. ದೇಶದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಏನಾಗಿದೆ ಎಂಬುದು ದೇಶದ 120 ಕೋಟಿ ಜನರಿಗೆ ಗೊತ್ತಿರುವ ವಿಚಾರವಾಗಿದೆ. ಬಿಜೆಪಿಯವರು ಕಾಂಗ್ರೆಸ್‍ಗೆ ಹೋಗುತ್ತಾರೆ ಅನ್ನೋದು ಬಸನಗೌಡ ಪಾಟೀಲ್ ಯತ್ನಾಳ್ ಅವರ ಅಭಿಪ್ರಾಯ ಇರಬಹುದು, ನನ್ನ ಅಭಿಪ್ರಾಯದಲ್ಲಿ ಬಿಜೆಪಿಯವರು ಯಾರೂ ಕಾಂಗ್ರೆಸ್‍ಗೆ ಹೋಗಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಪದ್ಮಭೂಷಣ ಪ್ರಶಸ್ತಿ ನಿರಾಕರಿಸಿದ ಬುದ್ಧದೇವ್ ಭಟ್ಟಾಚಾರ್ಯ

Share This Article
Leave a Comment

Leave a Reply

Your email address will not be published. Required fields are marked *