ಆನಂದ್ ಸಿಂಗ್ ರಾಜೀನಾಮೆಗೆ ಬೇರೆ ಕಾರಣವಿದೆ: ಸಿದ್ದರಾಮಯ್ಯ

Public TV
1 Min Read

ಮೈಸೂರು: ಆನಂದ್ ಸಿಂಗ್ ಸಚಿವ ಸ್ಥಾನಕ್ಕಾಗಿ ರಾಜೀನಾಮೆ ನೀಡಿಲ್ಲ, ಇದರ ಹಿಂದೆ ಬೇರೆ ಕಾರಣವಿದೆ. ರಮೇಶ್ ಜಾರಕಿಹೊಳಿ ಇನ್ನೂ ರಾಜೀನಾಮೆ ನೀಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಚಿವ ಸ್ಥಾನಕ್ಕಾಗಿ ಆನಂದ್ ಸಿಂಗ್ ರಾಜೀನಾಮೆ ನೀಡಿಲ್ಲ. ಜಿಂದಾಲ್ ವಿಚಾರವಾಗಿ ರಾಜೀನಾಮೆ ನೀಡಿದ್ದಾರೆ. ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿಲ್ಲ ಎಂದು ಸ್ಪೀಕರ್ ಸ್ಪಷ್ಟಪಡಿಸಿದ್ದು, ಮಾಧ್ಯಮಗಳಲ್ಲಿ ಬಂದಿರುವ ಲೆಟರ್ ಹೆಡ್ ಒಪ್ಪಲು ಸಾಧ್ಯವಿಲ್ಲ. ರಾಜೀನಾಮೆ ಬಳಿಕ ಆನಂದ್ ಸಿಂಗ್ ಸಂಪರ್ಕಕ್ಕೆ ಸಿಕ್ಕಿಲ್ಲ. ಆನಂದ್ ಸಿಂಗ್ ಜೊತೆ ಮಾತನಾಡುತ್ತೇನೆ. ಸದ್ಯಕ್ಕೆ ಸಮನ್ವಯ ಸಮಿತಿ ಸಭೆ ಕರೆಯುವ ಸಂದರ್ಭ ಬಂದಿಲ್ಲ ಎಂದು ಹೇಳಿದರು.

ಆಪರೇಷನ್ ಕಮಲ ಮಾಡುತ್ತಿಲ್ಲ ಎಂಬ ಜಿ.ಟಿ.ದೇವೇಗೌಡ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಆತನಿಗೆ ಆ ರೀತಿಯ ಮಾಹಿತಿ ಇರಬಹುದು. ಸ್ವತಃ ಅಮಿತ್ ಶಾ, ಪ್ರಧಾನಿ ಮೋದಿ ಆಪರೇಷನ್ ಕಮಲ ಮಾಡುತ್ತಿದ್ದಾರೆ ಎಂದು ಹೇಳುವ ಮೂಲಕ ತಿರುಗೇಟು ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *