ಮಣ್ಣಲ್ಲಿ ಮಣ್ಣಾದ ಡೆಪ್ಯುಟಿ ಸ್ಪೀಕರ್ ಆನಂದ ಮಾಮನಿ

Public TV
1 Min Read

ಬೆಳಗಾವಿ: ಸವದತ್ತಿ ಶ್ರೀರೇಣುಕಾ ಯಲ್ಲಮ್ಮನ ಕ್ಷೇತ್ರದ ಶಾಸಕ,  ವಿಧಾನ ಸಭೆ ಡೆಪ್ಯುಟಿ ಸ್ಪೀಕರ್ ಆನಂದ ಮಾಮನಿ (Ananda Mamani) ಅವರ ಅಂತ್ಯಕ್ರಿಯೆಯನ್ನು (Funeral) ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿಸಲಾಯಿತು.

ಬೆಳಗಾವಿ (Belgavi) ಜಿಲ್ಲೆಯ ಸವದತ್ತಿ (Savadatti) ಪಟ್ಟಣದ ಹೊರವಲಯದಲ್ಲಿರುವ ಯಡ್ರಾವಿ ರಸ್ತೆಯಲ್ಲಿರುವ ಚಂದ್ರಮಾ ಫಾರ್ಮ್ ಹೌಸ್‍ನಲ್ಲಿ ತಮ್ಮ ತಂದೆ ಚಂದ್ರಶೇಖರ ಮಾಮನಿ ಸಮಾಧಿ ಪಕ್ಕದಲ್ಲಿ, ಆನಂದ ಮಾಮನಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಈ ವೇಳೆ ಆನಂದ ಮಾಮನಿ ಇಬ್ಬರು ಧರ್ಮಪತ್ನಿಯರು, ಮಕ್ಕಳು ಸೇರಿದಂತೆ ಕುಟುಂಬಸ್ಥರು ಭಾಗಿಯಾಗಿದ್ದರು. ಇದರ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಸಿ.ಸಿ.ಪಾಟೀಲ್, ಶಂಕರಪಾಟೀಲ್, ಮನೇನಕೊಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಮಹೇಶ್ ತೆಂಗಿನಕಾಯಿ, ಕಾಂಗ್ರೆಸ್ ಮುಖಂಡ ಎನ್.ಎಚ್.ಕೋನರೆಡ್ಡಿ ಸೇರಿದಂತೆ ಇತರ ರಾಜಕೀಯ ಮುಖಂಡರು, ವಿವಿಧ ಮಠಾಧೀಶರು ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಿದ್ದರು.  ಇದನ್ನೂ ಓದಿ: ಆನಂದ ಮಾಮನಿ ನಿಧನ- ಕಿತ್ತೂರು ಉತ್ಸವ ನಾಳೆಗೆ ಮುಂದೂಡಿಕೆ

ಇದಕ್ಕೂ ಮೊದಲು ಸವದತ್ತಿ ಪಟ್ಟಣದ ರಾಮಾಪೂರ ಸೈಟ್‍ನಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು. ಇದಾದ ಬಳಿಕ ಆನಂದ ಮಾಮನಿ ಅವರ ಪಾರ್ಥಿವ ಶರೀರವನ್ನು ಸವದತ್ತಿ ಪಟ್ಟಣದ ವಿವಿಧ ಓಣಿ, ಗಲ್ಲಿಗಳಲ್ಲಿ ಅಂತಿಮ ಯಾತ್ರೆ ನಡೆಸಲಾಗಿತ್ತು.  ಇದನ್ನೂ ಓದಿ: ಡೆಪ್ಯೂಟಿ ಸ್ಪೀಕರ್ ಆನಂದ ಮಾಮನಿ ವಿಧಿವಶ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *