ನಾನು ಹಿಂದೂ, ಆದರೆ ನನಗೆ ಹಿಂದುತ್ವ ಬೇಕಿಲ್ಲ ಅಂತಾರೆ – ಆ ಮನುಷ್ಯನಿಗೆ ಅವನ ರಕ್ತಾನೇ ಗೊತ್ತಿಲ್ಲ: ಸಿದ್ದು ವಿರುದ್ಧ ಅನಂತ್ ಕುಮಾರ್ ಹೆಗಡೆ ಕಿಡಿ

Public TV
2 Min Read

ಮಂಗಳೂರು: ನಮ್ಮ ದೇಶದಲ್ಲಿ ಕೆಲವರು ಹಿಂದುತ್ವದ ಬಗ್ಗೆ ಚರ್ಚೆ ಮಾಡ್ತಾರೆ. ನಾನು ಹಿಂದೂ (Hindu), ಆದರೆ ನನಗೆ ಹಿಂದುತ್ವ ಬೇಕಿಲ್ಲ ಅಂತಾರೆ. ಅಬ್ಬಬ್ಬ ಆ ಮನುಷ್ಯನಿಗೆ ಅವನ ರಕ್ತಾನೇ ಗೊತ್ತಿಲ್ಲ. ಅಂಥವರಿಗೆಲ್ಲ ಹಿಂದುತ್ವ ಬೇಡ ಎಂದು ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಸಂಸದ ಅನಂತ್ ಕುಮಾರ್ ಹೆಗಡೆ (Anantkumar Hegde) ವಾಗ್ದಾಳಿ ನಡೆಸಿದ್ದಾರೆ.

ಪುತ್ತೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಮ್ಮ ದೇಶದಲ್ಲಿ ಕೆಲವರು ಹಿಂದುತ್ವದ ಬಗ್ಗೆ ಚರ್ಚೆ ಮಾಡ್ತಾರೆ. ನಾನು ಹಿಂದೂ, ಆದರೆ ನನಗೆ ಹಿಂದುತ್ವ ಬೇಕಿಲ್ಲ ಅಂತಾರೆ. ಅಬ್ಬಬ್ಬ ಆ ಮನುಷ್ಯನಿಗೆ ಅವನ ರಕ್ತಾನೇ ಗೊತ್ತಿಲ್ಲ. ಅಂಥವರಿಗೆಲ್ಲ ಹಿಂದುತ್ವ ಬೇಡ. ನಿನಗೆ ಬೇಕೋ ಬೇಡ್ವೋ, ಯಾರಿಗ್ ಬೇಕು, ನಿನಗೆ ಬೇಡ ಅಂತ ನಾವು ಪರಿಗಣನೆ ಮಾಡಿ ಆಗಿದೆ.
ಅವನು ಹಿಂದೂ ಅಲ್ಲ ಅಂತ ನಾವು ತೆಗೆದಿಟ್ಟಾಗಿದೆ. ಹಿಂದೂ ಅಂತ ಹೇಳಿಸಿಕೊಳ್ಳಲು ಕೆಲವು ಯೋಗ್ಯತೆಗಳಿವೆ. ಆಡಂಬರದ ಬದುಕು ಒಪ್ಪದಿರೋದು ಮತ್ತು ಸತ್ಯದ ಬದುಕು ಹಿಂದುತ್ವ. ಈ ಹಿಂದುತ್ವದ ಬಗ್ಗೆ ಇಂತಹ ಕಮಂಗಿಗಳಿಗೆ ಏನ್ರೀ ಅರ್ಥ ಆಗಬೇಕು ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಪ್ರತಿಯೊಬ್ಬ ಹಿಂದೂ ತನ್ನ ಮನೆಯಲ್ಲಿ ತಲ್ವಾರ್ ಇಡ್ಬೇಕು- ಮುತಾಲಿಕ್ ಪ್ರಚೋದನಕಾರಿ ಹೇಳಿಕೆ

ಜಾತಿಯ ಗೂಡು ಬಿಟ್ಟು ಹೊರಗೆ ಬರಲು ಸಾಧ್ಯವಿಲ್ಲದವ್ರೆಲ್ಲ ಹಿಂದುತ್ವದ ಬಗ್ಗೆ ಚರ್ಚೆ ಮಾಡ್ತಾರೆ. ಪುಸ್ತಕ ಓದಲು ಯೋಗ್ಯತೆ ಇಲ್ಲದವ್ರೆಲ್ಲಾ ಹಿಂದುತ್ವದ ಬಗ್ಗೆ ಚರ್ಚೆ ಮಾಡ್ತಾರೆ. ದೇವಸ್ಥಾನಕ್ಕೆ ಹೋಗುವಾಗ ಹೇಗೆ ಹೋಗಬೇಕು ಅಂತ ಗೊತ್ತಿಲ್ಲದವರೆಲ್ಲಾ ಹಿಂದುತ್ವದ ಬಗ್ಗೆ ಚರ್ಚೆ ಮಾಡ್ತಾರೆ. ಕುತ್ತಿಗೆಗೆ ಹಾಕುವ ಶಾಲಿನಲ್ಲಿ ಹಿಂದುತ್ವ ಕಾಣ ಬಾರದು. ಹಣೆಗೆ ಇಟ್ಟಿರೋ ತಿಲಕದಲ್ಲಿ ಹಿಂದುತ್ವ ಕಾಣಬಾರದು, ನಮ್ಮ ಬದುಕಿನಲ್ಲಿ ಕಾಣಬೇಕು. ನನ್ನ ನಾಲಗೆ, ನನ್ನ ಬದುಕು, ನನ್ನ ವಿಚಾರದಲ್ಲಿ ಕಾಣುವುದು ನಿಜವಾದ ಹಿಂದುತ್ವ. ಒಳಗಡೆ ಒಂದು, ಹೊರಗಡೆ ಒಂದು ಇರೋದನ್ನು ಹಿಂದುತ್ವ ಎನ್ನಲು ಸಾಧ್ಯವಿಲ್ಲ. ಸುಳ್ಳು ಹೇಳುವುದು, ಅಸತ್ಯದ ಮಾತು ಹಿಂದುತ್ವ ಅಲ್ಲ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಗುಜರಾತ್ ಸಕ್ಸಸ್: ಹುಬ್ಬಳ್ಳಿಯಲ್ಲಿ ಮೋದಿ ಶೋ ಸ್ಯಾಂಪಲ್ ಅಷ್ಟೇ – ಕರ್ನಾಟಕದಲ್ಲಿ ಮುಂದಿದೆ ಮೆಗಾ ಹವಾ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *