ಲತಾ ಮಂಗೇಶ್ಕರ್ ಶವದ ಮೇಲೆ ಉಗುಳುವುದು, ಶಾರೂಖ್ ಹೀನ ಮನಸ್ಥಿತಿಯನ್ನು ತೋರಿಸುತ್ತದೆ: ಅನಂತಕುಮಾರ್ ಹೆಗಡೆ ಕಿಡಿ

Public TV
1 Min Read

ಕಾರವಾರ: ಭಾರತ ರತ್ನ ಲತಾ ಮಂಗೇಶ್ಕರ್ ಅಂತಿಮ ದರ್ಶನ ಪಡೆಯುವ ವೇಳೆ ಶ್ರದ್ಧಾಂಜಲಿ ಸಲ್ಲಿಸಲು ಆಗಮಿಸಿದ್ದ ಶಾರೂಖ್ ಖಾನ್ ಮಾಸ್ಕ್ ತೆಗೆದು ಲತಾ ಮಂಗೇಶ್ಕರ್ ಮೃತದೇಹದ ಮೇಲೆ ಉಗುಳಿದ್ದಾರೆ. ಶಾರುಖ್ ಖಾನ್‍ರವರು ಶ್ರದ್ಧಾಂಜಲಿ ಸಲ್ಲಿಸುತ್ತಿರುವ ವೀಡಿಯೋವನ್ನು ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ್ ಹೆಗಡೆ ತಮ್ಮ ಫೇಸ್‍ಬುಕ್‍ನಲ್ಲಿ ಹಂಚಿಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಲಿವುಡ್ ಖಾನ್‍ಗಳ ದರಿದ್ರ ಮನಸ್ಥಿತಿಯೇ ಹೀಗೆ, ತಮ್ಮ ಅಸಹಜ ನಡವಳಿಕೆಯಿಂದ ದೇಶದ ಗಮನ ತಮ್ಮತ್ತ ಸೆಳೆಯುವುದು, ಪ್ರಚಾರದ ತೆವಲಾಗಿದೆ. ಸಂಪ್ರದಾಯದ ಹೆಸರಿನಲ್ಲಿ ಅನಿಷ್ಟಗಳನ್ನು ಮಾಡುವುದು, ರಾಷ್ಟ್ರಧ್ವಜವನ್ನು ಹೊದಿಸಿದ ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರ ಶವದ ಮೇಲೆ ಉಗುಳುವುದು, ಅವರ ಹೀನ ಮನಸ್ಥಿತಿಯನ್ನು ತೋರಿಸುತ್ತದೆ. ಇವುಗಳನ್ನು ಬುಡಸಮೇತ ಕಿತ್ತುಹಾಕೋ ತನಕ ಹೀಗೆ ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಶಾರೂಖ್ ಜೊತೆ ಪ್ರಾರ್ಥನೆ ಮಾಡಿದ್ದು ಪತ್ನಿ ಗೌರಿ ಖಾನ್ ಅಲ್ಲ

ವೀಡಿಯೋದಲ್ಲಿ ಏನಿದೆ?: ಲತಾ ಮಂಗೇಶ್ಕರ್ ಅವರ ಮೃತದೇಹದ ಎದುರಿನಲ್ಲಿ ನಿಂತು ಪ್ರಾರ್ಥನೆ ಮಾಡುವಾಗ ಶಾರೂಖ್ ಖಾನ್ ಅವರು ಮಾಸ್ಕ್ ಧರಿಸಿದ್ದರು. ಗಾಯಕಿಯ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅವರು ಪ್ರಾರ್ಥನೆ ಮಾಡಿದರು. ಬಳಿಕ ಮಾಸ್ಕ್ ತೆಗೆದು ಪಾರ್ಥಿವ ಶರೀರದ ಕಡೆಗೆ ಗಾಳಿ ಊದಿದರು. ಮುಸ್ಲಿಂ ಸಮುದಾಯದಲ್ಲಿ ಈ ರೀತಿ ಮಾಡುವ ಪದ್ಧತಿ ಇದೆ. ಆದರೆ ಅವರು ಗಾಳಿ ಊದಿದ್ದನ್ನು ಕೆಲವರು ತಪ್ಪಾಗಿ ಅರ್ಥೈಸಿದ್ದಾರೆ. ಲತಾಜೀ ಪಾರ್ಥಿವ ಶರೀರಕ್ಕೆ ಶಾರೂಖ್ ಖಾನ್ ಉಗಿದಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಲತಾ ಮಂಗೇಶ್ಕರ್ ಅವರನ್ನು ಸಚಿನ್ ತೆಂಡೂಲ್ಕರ್ ಏನೆಂದು ಕರೆಯುತ್ತಿದ್ದರು ಗೊತ್ತಾ?

Share This Article
Leave a Comment

Leave a Reply

Your email address will not be published. Required fields are marked *